ಬ್ರೇಕಿಂಗ್ ನ್ಯೂಸ್
09-05-22 06:00 pm HK Desk News ದೇಶ - ವಿದೇಶ
ಕೊಲಂಬೋ, ಮೇ 9: ತುರ್ತು ಪರಿಸ್ಥಿತಿಯನ್ನೂ ಲೆಕ್ಕಿಸದೆ ಜನರು ಹಿಂಸಾಚಾರಕ್ಕಿಳಿದ ಬೆನ್ನಲ್ಲೇ ಶ್ರೀಲಂಕಾ ಪ್ರಧಾನಿ ಮಹೀಂದ್ರಾ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜಧಾನಿ ಕೊಲಂಬೋ ಸೇರಿದಂತೆ ಪ್ರಮುಖ ನಗರಗಳಲ್ಲಿ ಭಾರೀ ಪ್ರತಿಭಟನೆ, ದಂಗೆ ಎದ್ದಿರುವ ಘಟನೆಗಳು ನಡೆದಿದ್ದು ಸರಕಾರದ ಬೆಂಬಲಿಗರು ಮತ್ತು ವಿರೋಧಿ ಪ್ರತಿಭಟನಾಕಾರರು ನಡುವೆ ಹಿಂಸಾಚಾರ ನಡೆದು ನೂರಾರು ಮಂದಿ ಗಾಯಗೊಂಡಿದ್ದಾರೆ.
76 ವರ್ಷದ ಪ್ರಧಾನಿ ಮಹೀಂದ್ರಾ ರಾಜಪಕ್ಸ ಅವರು ತನ್ನ ತಮ್ಮ ಅಧ್ಯಕ್ಷ ಸ್ಥಾನದಲ್ಲಿರುವ ಗೊಟಬಾಯ ರಾಜಪಕ್ಸ ಅವರಿಗೆ ಪತ್ರದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದೇ ವೇಳೆ, ಒಮ್ಮತದ ಸರಕಾರ ರಚಿಸುವುದಕ್ಕೆ ಒಲವು ತೋರಿದ್ದಾರೆ. ಸೋಮವಾರ ಬೆಳಗ್ಗೆ ಪ್ರತಿಭಟನೆ, ಹಿಂಸಾಚಾರದ ನಡುವೆಯೂ ಅಧಿಕಾರ ಬಿಟ್ಟು ಕೊಡಲ್ಲ ಎಂದು ಮಹೀಂದ್ರಾ ರಾಜಪಕ್ಸ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜಿನಾಮೆ ರವಾನಿಸಿ ನೂತನ ಸರಕಾರ ರಚಿಸಲು ಅನುವು ಮಾಡುತ್ತಿರುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ.

ಈಗಿನ ಸನ್ನಿವೇಶಕ್ಕೆ ಕಾರಣವಾಗಿರುವ ಪ್ರಧಾನಿ ಮತ್ತು ಅಧ್ಯಕ್ಷರು ರಾಜಿನಾಮೆ ಕೊಟ್ಟು ತೊಲಗಬೇಕೆಂದು ಎರಡು ತಿಂಗಳಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆ ದಿಢೀರ್ ಏರಿಕೆ ಆಗಿರುವುದರಿಂದ ಜನರು ಬದುಕಲು ಕಷ್ಟ ಪಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸಿಗದೆ ಜನರು ಪರದಾಡುತ್ತಿದ್ದಾರೆ. ಜನರು ಒಂದೇ ಸಮನೆ ಪ್ರತಿಭಟನೆ, ಹಿಂಸಾಚಾರಕ್ಕೆ ಇಳಿದಿರುವುದರಿಂದ ವಾರದ ಹಿಂದೆ ಮತ್ತೆ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು.
ಇಪ್ಪತ್ತು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಶ್ರೀಲಂಕಾದಲ್ಲಿ ಒಂದೇ ಕುಟುಂಬದ ಅಧಿಪತ್ಯ ಇದೆ. ಈ ಅವಧಿಯಲ್ಲಿ ಜನರನ್ನು ಓಲೈಸುತ್ತಾ ರಾಜಕಾರಣ ನಡೆಸಿರುವುದರಿಂದ ಶ್ರೀಲಂಕಾ ರೂಪಾಯಿ ಬೆಲೆ ಕಳಕೊಂಡಿದೆ. ಇದರಿಂದಾಗಿ ಜನರು ಸರಕಾರದ ವಿರುದ್ಧ ದಂಗೆ ಎದ್ದಿದ್ದು, ಇನ್ನಾದರೂ ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಬಿದ್ದೀತಾ ಎನ್ನುವ ಆಶಯ ಉಂಟಾಗಿದೆ. ಮಹೀಂದ್ರಾ ರಾಜಪಕ್ಸ ಅವರೇ ಬಹುಕಾಲದಿಂದ ತನ್ನ ಕುಟುಂಬ ಸದಸ್ಯರನ್ನು ಪ್ರಮುಖ ಸ್ಥಾನಗಳಲ್ಲಿ ಇಟ್ಟುಕೊಂಡು ಒಟ್ಟು ಸರಕಾರವನ್ನು ನಿಯಂತ್ರಿಸುತ್ತಿದ್ದರು.
Amid the worst economic crisis the country has seen since independence, Sri Lankan Prime Minister Mahinda Rajapaksa resigned from his post on Monday. Sri Lanka's health minister Prof Channa Jayasumana has also handed over his letter of resignation to the President.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm