ಬ್ರೇಕಿಂಗ್ ನ್ಯೂಸ್
09-05-22 06:00 pm HK Desk News ದೇಶ - ವಿದೇಶ
ಕೊಲಂಬೋ, ಮೇ 9: ತುರ್ತು ಪರಿಸ್ಥಿತಿಯನ್ನೂ ಲೆಕ್ಕಿಸದೆ ಜನರು ಹಿಂಸಾಚಾರಕ್ಕಿಳಿದ ಬೆನ್ನಲ್ಲೇ ಶ್ರೀಲಂಕಾ ಪ್ರಧಾನಿ ಮಹೀಂದ್ರಾ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜಧಾನಿ ಕೊಲಂಬೋ ಸೇರಿದಂತೆ ಪ್ರಮುಖ ನಗರಗಳಲ್ಲಿ ಭಾರೀ ಪ್ರತಿಭಟನೆ, ದಂಗೆ ಎದ್ದಿರುವ ಘಟನೆಗಳು ನಡೆದಿದ್ದು ಸರಕಾರದ ಬೆಂಬಲಿಗರು ಮತ್ತು ವಿರೋಧಿ ಪ್ರತಿಭಟನಾಕಾರರು ನಡುವೆ ಹಿಂಸಾಚಾರ ನಡೆದು ನೂರಾರು ಮಂದಿ ಗಾಯಗೊಂಡಿದ್ದಾರೆ.
76 ವರ್ಷದ ಪ್ರಧಾನಿ ಮಹೀಂದ್ರಾ ರಾಜಪಕ್ಸ ಅವರು ತನ್ನ ತಮ್ಮ ಅಧ್ಯಕ್ಷ ಸ್ಥಾನದಲ್ಲಿರುವ ಗೊಟಬಾಯ ರಾಜಪಕ್ಸ ಅವರಿಗೆ ಪತ್ರದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದೇ ವೇಳೆ, ಒಮ್ಮತದ ಸರಕಾರ ರಚಿಸುವುದಕ್ಕೆ ಒಲವು ತೋರಿದ್ದಾರೆ. ಸೋಮವಾರ ಬೆಳಗ್ಗೆ ಪ್ರತಿಭಟನೆ, ಹಿಂಸಾಚಾರದ ನಡುವೆಯೂ ಅಧಿಕಾರ ಬಿಟ್ಟು ಕೊಡಲ್ಲ ಎಂದು ಮಹೀಂದ್ರಾ ರಾಜಪಕ್ಸ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜಿನಾಮೆ ರವಾನಿಸಿ ನೂತನ ಸರಕಾರ ರಚಿಸಲು ಅನುವು ಮಾಡುತ್ತಿರುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ.

ಈಗಿನ ಸನ್ನಿವೇಶಕ್ಕೆ ಕಾರಣವಾಗಿರುವ ಪ್ರಧಾನಿ ಮತ್ತು ಅಧ್ಯಕ್ಷರು ರಾಜಿನಾಮೆ ಕೊಟ್ಟು ತೊಲಗಬೇಕೆಂದು ಎರಡು ತಿಂಗಳಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆ ದಿಢೀರ್ ಏರಿಕೆ ಆಗಿರುವುದರಿಂದ ಜನರು ಬದುಕಲು ಕಷ್ಟ ಪಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸಿಗದೆ ಜನರು ಪರದಾಡುತ್ತಿದ್ದಾರೆ. ಜನರು ಒಂದೇ ಸಮನೆ ಪ್ರತಿಭಟನೆ, ಹಿಂಸಾಚಾರಕ್ಕೆ ಇಳಿದಿರುವುದರಿಂದ ವಾರದ ಹಿಂದೆ ಮತ್ತೆ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು.
ಇಪ್ಪತ್ತು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಶ್ರೀಲಂಕಾದಲ್ಲಿ ಒಂದೇ ಕುಟುಂಬದ ಅಧಿಪತ್ಯ ಇದೆ. ಈ ಅವಧಿಯಲ್ಲಿ ಜನರನ್ನು ಓಲೈಸುತ್ತಾ ರಾಜಕಾರಣ ನಡೆಸಿರುವುದರಿಂದ ಶ್ರೀಲಂಕಾ ರೂಪಾಯಿ ಬೆಲೆ ಕಳಕೊಂಡಿದೆ. ಇದರಿಂದಾಗಿ ಜನರು ಸರಕಾರದ ವಿರುದ್ಧ ದಂಗೆ ಎದ್ದಿದ್ದು, ಇನ್ನಾದರೂ ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಬಿದ್ದೀತಾ ಎನ್ನುವ ಆಶಯ ಉಂಟಾಗಿದೆ. ಮಹೀಂದ್ರಾ ರಾಜಪಕ್ಸ ಅವರೇ ಬಹುಕಾಲದಿಂದ ತನ್ನ ಕುಟುಂಬ ಸದಸ್ಯರನ್ನು ಪ್ರಮುಖ ಸ್ಥಾನಗಳಲ್ಲಿ ಇಟ್ಟುಕೊಂಡು ಒಟ್ಟು ಸರಕಾರವನ್ನು ನಿಯಂತ್ರಿಸುತ್ತಿದ್ದರು.
Amid the worst economic crisis the country has seen since independence, Sri Lankan Prime Minister Mahinda Rajapaksa resigned from his post on Monday. Sri Lanka's health minister Prof Channa Jayasumana has also handed over his letter of resignation to the President.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am