ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm