ಬ್ರೇಕಿಂಗ್ ನ್ಯೂಸ್
10-05-22 01:50 pm HK Desk News ದೇಶ - ವಿದೇಶ
ನವದೆಹಲಿ, ಮೇ 10: ಭಾರತದ ಕೊರೊನಾ ಸನ್ನಿವೇಶಗಳನ್ನು ಹಿಡಿದಿಟ್ಟ ಖ್ಯಾತ ಫೋಟೋ ಜರ್ನಲಿಸ್ಟ್ ಆಗಿದ್ದ ದಿವಂಗತ ಡ್ಯಾನಿಶ್ ಆಲಿಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ನೀಡಲಾಗಿದೆ. ರಾಯ್ಟರ್ಟ್ ಸುದ್ದಿ ಸಂಸ್ಥೆಯ ಪತ್ರಕರ್ತರಾದ ಅದ್ನಾನ್ ಅಬಿದಿ, ಸನ್ನಾ ಇರ್ಶಾದ್ ಮಟ್ಟೂ ಮತ್ತು ಅಮಿತ್ ದವೆ ಅವರಿಗೂ ಪುಲಿಟ್ಜರ್ ಪ್ರಶಸ್ತಿ ಘೋಷಿಸಲಾಗಿದೆ.
ಭಾರತ ಮೂಲದ ಡ್ಯಾನಿಶ್ ಆಲಿ ರಾಯ್ಟರ್ಟ್ ಸಂಸ್ಥೆಯಲ್ಲಿ ಸೀನಿಯರ್ ಫೋಟೋಗ್ರಾಫರ್ ಆಗಿದ್ದರು. ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕಾಲೇಜಿನಲ್ಲಿ ಪದವಿ ಪಡೆದಿದ್ದ ಡ್ಯಾನಿಶ್, ಆಬಳಿಕ ಸಮೂಹ ಸಂವಹನ ವಿಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

2018ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಕುರಿತು ಡ್ಯಾಕ್ಯುಮೆಂಟರಿ ಮಾಡಿದ ಡ್ಯಾನಿಶ್ ಆಲಿ ನೇತೃತ್ವದ ತಂಡಕ್ಕೆ ಫೀಚರ್ ಫೋಟೋಗ್ರಫಿಗಾಗಿ ಪುಲಿಟ್ಜರ್ ಪ್ರಶಸ್ತಿ ನೀಡಲಾಗಿತ್ತು. 2021ರಲ್ಲಿ ಅಫ್ಘಾನಿಸ್ತಾನ- ತಾಲಿಬಾನಿಗಳ ಸಂಘರ್ಷದ ಕವರೇಜ್ ಮಾಡುವುದಕ್ಕಾಗಿ ತೆರಳಿದ್ದ ಡ್ಯಾನಿಶ್ ಆಲಿಯನ್ನು ತಾಲಿಬಾನಿ ಉಗ್ರರು ಹತ್ಯೆ ಮಾಡಿದ್ದರು. ಪಾಕಿಸ್ಥಾನ ಗಡಿಭಾಗ ಸ್ಪಿನ್ ಬೋಲ್ಡಾಕ್ ಎಂಬ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಡ್ಯಾನಿಶ್ ಆಲಿ, ಜರ್ಮನ್ ಮೂಲದ ಯುವತಿಯನ್ನು ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದರು.
![]()
ಡ್ಯಾನಿಶ್ ಆಲಿ, ರಾಯ್ಟರ್ಸ್ ಸಂಸ್ಥೆಯಲ್ಲಿ ಫೋಟೋಗ್ರಾಫರ್ ಆಗಿದ್ದುಕೊಂಡು ಜಾಗತಿಕ ವಿದ್ಯಮಾನಗಳ ಛಾಯಾಗ್ರಹಣಕ್ಕಾಗಿ ನಾನಾ ದೇಶಗಳನ್ನು ಸುತ್ತಿದ್ದರು. ಅಫ್ಘಾನಿಸ್ತಾನ, ಇರಾಕ್ ಯುದ್ಧಗಳು, ರೋಹಿಂಗ್ಯಾ ಮುಸ್ಲಿಮರ ಸಂಘರ್ಷ, ಹಾಂಗ್ ಕಾಂಗ್ ಪ್ರತಿಭಟನೆ, ನೇಪಾಳಿ ಭೂಕಂಪ ಹೀಗೆ ಜಾಗತಿಕ ಪ್ರಮುಖ ವಿದ್ಯಮಾನಗಳ ಛಾಯಾಗ್ರಹಣದ ಮೂಲಕ ವಿಶ್ವದ ಗಮನ ಸೆಳೆದಿದ್ದರು. ಇದೀಗ ಕೋವಿಡ್ ಸಂದರ್ಭದಲ್ಲಿ ಭಾರತದ ದೆಹಲಿ ಮತ್ತಿತರ ಕಡೆ ಎದುರಾಗಿದ್ದ ಸನ್ನಿವೇಶಗಳ ಫೀಚರ್ ಫೋಟೋಗ್ರಫಿಗಾಗಿ ಡ್ಯಾನಿಶ್ ಆಲಿಗೆ ಮರಣೋತ್ತರವಾಗಿ ಪುಲಿಟ್ಜರ್ ಪ್ರಶಸ್ತಿ ಘೋಷಿಸಲಾಗಿದೆ.
Journalist Danish Siddiqui, who lost his life while covering the conflict situation in Afghanistan, has been awarded the Pulitzer Prize for feature photography for his coverage of the Covid situation in India. Along with him, Reuters journalists Adnan Abidi, Sanna Irshad Mattoo, and Amit Dave were also honoured with the Pulitzer Prize.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 09:50 pm
Mangalore Correspondent
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm