ಬ್ರೇಕಿಂಗ್ ನ್ಯೂಸ್
25-09-20 09:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 26: ಜಿಎಸ್ ಟಿಯ ಕೇಂದ್ರದ ಪಾಲು ರಾಜ್ಯಕ್ಕೆ ಬಂದಿಲ್ಲ ಎಂಬ ದೂರಿನ ನಡುವೆಯೇ ಕೇಂದ್ರ ಸರಕಾರ ಜಿಎಸ್ ಟಿ ಸಂಗ್ರಹದಲ್ಲಿ ಎಡವಟ್ಟು ಮಾಡಿಕೊಂಡಿರುವುದು ಬಯಲಾಗಿದೆ. ರಾಜ್ಯಗಳಿಗೆ ಪರಿಹಾರ ನೀಡುವುದಕ್ಕಾಗಿ ಸಂಗ್ರಹಿಸಿದ ಜಿಎಸ್ ಟಿ ಸೆಸ್ ಪಾಲಿನ ಎರಡು ವರ್ಷದ 42,272 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರಕಾರ ಬೇರೆಡೆಗೆ ವರ್ಗಾಯಿಸಿರುವ ಬಗ್ಗೆ ಸಿಎಜಿ ಪತ್ತೆ ಮಾಡಿದೆ.
ಲೆಕ್ಕ ಪರಿಶೋಧನಾ ವರದಿಯಲ್ಲಿ ಮಹಾಲೇಖಪಾಲರು ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. ರಾಜ್ಯ ಸರಕಾರಗಳಿಗೆ ನೀಡಲೆಂದೇ ಇರುವ ಈ ಹಣವನ್ನು ಜಿಎಸ್ ಟಿ ಪರಿಹಾರ ಸೆಸ್ ಸಂಗ್ರಹ ನಿಧಿಗೇ ಜಮೆ ಮಾಡಬೇಕಾಗಿತ್ತು. ಆದರೆ, ಕೇಂದ್ರ ಸರಕಾರ ಜಿಎಸ್ ಟಿ ಜಾರಿಗೆ ಬಂದ 2017 ಮತ್ತು 2018ರ ಎರಡು ವರ್ಷಗಳಲ್ಲಿ ಹೀಗೆ ಸಂಗ್ರಹವಾದ ಹಣವನ್ನು ಜಿಎಸ್ ಟಿ ನಿಧಿಯಲ್ಲಿ ಉಳಿಸಿಕೊಳ್ಳದೇ ಇತರೇ ಉಪಯೋಗಕ್ಕೆ ಬಳಸಿಕೊಂಡಿದೆ ಅನ್ನುವ ಅನುಮಾನ ಕೇಳಿಬಂದಿದೆ.

ಸಿಎಜಿ ಪ್ರಕಾರ, 2017-18ರಲ್ಲಿ 62,612 ಕೋಟಿ ರೂಪಾಯಿ ಜಿಎಸ್ ಟಿ ಸೆಸ್ ಸಂಗ್ರಹವಾಗಿತ್ತು. ಈ ಪೈಕಿ 54,146 ಕೋಟಿ ರೂಪಾಯಿ ಮಾತ್ರ ಜಿಎಸ್ ಟಿ ಪರಿಹಾರ ನಿಧಿಗೆ ಜಮೆಯಾಗಿದೆ. ಇನ್ನು 2018-19ರಲ್ಲಿ ಸಂಗ್ರಹಗೊಂಡ 95,081 ಜಿಎಸ್ ಟಿ ಸೆಸ್ ಪೈಕಿ 54,275 ಕೋಟಿ ರೂ.ಗಳನ್ನು ಜಮೆ ಮಾಡಲಾಗಿತ್ತು. ಹೀಗೆ ಎರಡು ಅವಧಿಗಳಲ್ಲಿ ಜಿಎಸ್ ಟಿ ಸೆಸ್ ಹಣವನ್ನು ಕೇಂದ್ರ ಸರಕಾರ ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವುದನ್ನು ಸಿಎಜಿ ಪತ್ತೆ ಮಾಡಿದೆ.
ಜಿಎಸ್ ಟಿ ಪರಿಹಾರ ಸೆಸ್ ಕಾಯ್ದೆ ಪ್ರಕಾರ, ಸಂಗ್ರಹಗೊಂಡ ಪೂರ್ತಿ ಹಣವನ್ನು ಪರಿಹಾರ ನಿಧಿಗೇ ಜಮೆ ಮಾಡಬೇಕಾಗುತ್ತದೆ. ಅಲ್ಲದೆ, ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿಯಮ ಇರುತ್ತದೆ. ಈ ರೀತಿ ಜಿಎಸ್ ಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಉಳಿಸಿಕೊಳ್ಳುವುದು ಜಿಎಸ್ ಟಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am