ಬ್ರೇಕಿಂಗ್ ನ್ಯೂಸ್
12-05-22 08:59 pm HK Desk News ದೇಶ - ವಿದೇಶ
ನವದೆಹಲಿ, ಮೇ 12: ವೃದ್ಧ ದಂಪತಿಗೆ ಮೊಮ್ಮಕ್ಕಳ ಮುಖ ನೋಡಬೇಕು, ಅವರ ಜೊತೆ ಆಟ ಆಡಬೇಕು ಅನ್ನೋ ಆಸೆ. ಆದರೆ ಮಗ - ಸೊಸೆ ಮದುವೆ ಆಗಿ 6 ವರ್ಷವಾದರೂ ಮಕ್ಕಳು ಮಾಡುವುದನ್ನು ಮರೆತಿದ್ದಾರೆ ಎನ್ನುವ ಸಿಟ್ಟು ವೃದ್ಧ ದಂಪತಿಯದ್ದು. ಇದೇ ಕಾರಣಕ್ಕೆ ವೃದ್ಧ ದಂಪತಿ ಈಗ ಮಗ-ಸೊಸೆಯ ವಿರುದ್ಧವೇ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಒಂದು ವರ್ಷದೊಳಗೆ ಮಗ-ಸೊಸೆ ತಮಗೆ ಮೊಮ್ಮಗುವನ್ನ ಕೊಡಬೇಕು, ಇಲ್ಲದೇ ಹೋದರೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣ ನಡೆದಿರೋದು ಉತ್ತರಾಖಂಡದ ಹರಿದ್ವಾರದಲ್ಲಿ. ಸಂಜೀವ ಪ್ರಸಾದ್ ಮತ್ತು ಅವರ ಪತ್ನಿ ಸಾಧನಾ ಪ್ರಸಾದ್ ಈಗ ಮೊಮ್ಮಗುವಿನ ಮುಖ ನೋಡುವ ಆಸೆಯಿಂದ ಮಗ - ಸೊಸೆಯ ವಿರುದ್ಧವೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅವರಿಗೆ ಮಗು ಗಂಡು, ಹೆಣ್ಣು ಯಾವುದಾದ್ರೂ ಓಕೆ. ಮೊಮ್ಮಗು ಇದ್ದರೆ ಸಾಕು ಅಂತ ಹೇಳುತ್ತಿದ್ದಾರೆ.

ಮಗನ ಶಿಕ್ಷಣ, ಆತನನ್ನ ಅಮೆರಿಕಾ ಕಳುಹಿಸುವ ಸಲುವಾಗಿ ಇದ್ದ ಹಣವನ್ನೆಲ್ಲ ಖರ್ಚು ಮಾಡಿದ್ದೇನೆ. ಎರಡು ಕೋಟಿ ಖರ್ಚು ಮಾಡಿ ಮದುವೆ ಮಾಡಿ ಹನಿಮೂನ್ ಮಾಡಲು ಥೈಲ್ಯಾಂಡ್ ಕಳಿಸಿಕೊಟ್ಟಿದ್ದೇನೆ. ಆನಂತರ ಹಣ ಇಲ್ಲದೆ ಸ್ವಂತ ಮನೆಗಾಗಿ ಸಾಲ ಮಾಡಿದ್ದೇನೆ. ಈಗ ನಾನು ಆರ್ಥಿಕ ಸಮಸ್ಯೆಯನ್ನ ಎದುರಿಸ್ತಾ ಇದ್ದೇನೆ. ಮಗನಿಗೆ ಎಷ್ಟು ಹೇಳಿದರೂ ಇತ್ತ ಗಮನ ಹರಿಸುತ್ತಿಲ್ಲ. ತಾನು ಇಷ್ಟೆಲ್ಲ ಸಮಸ್ಯೆ ಎದುರಿಸುತ್ತಿದ್ದರೂ ಮಗನಿಗೆ ನಮ್ಮ ಬಗ್ಗೆ ಕಾಳಜಿಯೇ ಇಲ್ಲ. ಆದ್ದರಿಂದ ನಾನು ಮತ್ತು ನನ್ನ ಹೆಂಡತಿ ಇಬ್ಬರು ಸೇರಿ ಮಗ - ಸೊಸೆಯ ವಿರುದ್ಧವೇ ಕೇಸ್ ಹಾಕಿದ್ದೇವೆ ಎಂದು ಸಂಜೀವ ಪ್ರಸಾದ್ ಹೇಳಿದ್ದಾರೆ.
ದಂಪತಿ ತಮ್ಮ ಪುತ್ರ ಶ್ರೇಯ್ ಸಾಗರ್ ಗೆ 2016 ರಲ್ಲಿ ಶುಭಾಂಗಿ ಎಂಬ ವಧುವಿನ ಜೊತೆಗೆ ಮದುವೆ ಮಾಡಿದ್ದರು. ಆನಂತರ ಮೊಮ್ಮಗು ಬೇಕೆಂದು ತಮ್ಮದೇ ಖರ್ಚಿನಲ್ಲಿ ಹನಿಮೂನ್ ಕಳಿಸಿದ್ದರು. ಅದಕ್ಕೂ ಮೊದಲು ಮಗನಿಗೆ 65 ಲಕ್ಷ ಖರ್ಚು ಮಾಡಿ ಅಮೆರಿಕದಲ್ಲಿ ವಿಮಾನದ ಪೈಲಟ್ ಓದಿಸಿದ್ದರು. ಈಗ ಮೊಮ್ಮಗುವಿನ ಬಗ್ಗೆ ಕೇಳಿದರೆ, ಮಗ ಸೊಸೆ ಕೇರ್ ಮಾಡುತ್ತಿಲ್ಲ. ನಮ್ಮನ್ನು ನೋಡಿಕೊಳ್ಳುವುದಕ್ಕೂ ತಯಾರಿಲ್ಲ ಎಂದು ಸಂಜೀವ ಪ್ರಸಾದ್ ಅಲವತ್ತುಕೊಂಡಿದ್ದಾರೆ.
In a bizzare case, a couple has moved a court against their son and daughter-in-law and has demanded either a grandchild or Rs 5 crore in compensation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm