ಬ್ರೇಕಿಂಗ್ ನ್ಯೂಸ್
13-05-22 01:20 pm HK Desk News ದೇಶ - ವಿದೇಶ
ನವದೆಹಲಿ, ಮೇ 13 : 'ಮೋದಿ ಜೀ, ನೀವು ಎರಡು ಅವಧಿಗೆ ಪ್ರಧಾನಿಯಾದರೆ ಸಾಕು' ಎಂಬುದಾಗಿ ನನ್ನನ್ನು ಭೇಟಿಯಾದ ಪ್ರತಿಪಕ್ಷದ ನಾಯಕರೊಬ್ಬರು ಹೇಳಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ.
ವಿಧವೆಯರು, ವೃದ್ಧರು ಹಾಗೂ ನಿರ್ಗತಿಕ ನಾಗರಿಕರಿಗೆ ಹಣಕಾಸು ನೆರವು ನೀಡಲು ಗುಜರಾತ್ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಫಲಾನುಭವಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮೋದಿ ಈ ಮಾತುಗಳನ್ನಾಡಿದ್ದಾರೆ.
ಒಂದು ದಿನ ಒಬ್ಬ ಅತಿದೊಡ್ಡ ನಾಯಕರು ನನ್ನನ್ನು ಭೇಟಿಯಾಗಿದ್ದರು. ಅವರು ರಾಜಕೀಯವಾಗಿ ನಮ್ಮನ್ನು ಸದಾ ವಿರೋಧಿಸುತ್ತಿರುವವರು. ಆದರೆ ನಾನು ಅವರನ್ನು ಗೌರವಿಸುತ್ತೇನೆ. ಅವರು ಕೆಲವು ವಿಷಯಗಳ ಬಗ್ಗೆ ಸಂತುಷ್ಟರಾಗಿರಲಿಲ್ಲ. ಹೀಗಾಗಿ ಅವರು ನನ್ನನ್ನು ಭೇಟಿಯಾಗಲು ಬಂದಿದ್ದರು ಎಂದು ಮೋದಿ ಹೇಳಿದ್ದಾರೆ.
'ಅವರು ನನ್ನ ಬಳಿ, ಮೋದಿ ಜೀ, ದೇಶವು ಎರಡು ಬಾರಿ ನಿಮ್ಮನ್ನು ಪ್ರಧಾನಿಯನ್ನಾಗಿ ಮಾಡಿದೆ. ಇದಕ್ಕಿಂತ ಹೆಚ್ಚು ನೀವೇನು ಬಯಸುತ್ತೀರಿ ಎಂದು ಕೇಳಿದ್ದರು. ಒಬ್ಬರು ಎರಡು ಬಾರಿ ಪ್ರಧಾನಿಯಾದರೆ ಎಲ್ಲವನ್ನೂ ಸಾಧಿಸಿದಂತಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.
'ಆದರೆ, ಮೋದಿ ವಿಭಿನ್ನ ಗುಣಗಳಿಂದ ರೂಪಿಸಲ್ಪಟ್ಟವರು ಎಂಬುದು ಅವರಿಗೆ ತಿಳಿದಿರಲಿಲ್ಲ. ಮೋದಿಯನ್ನು ಗುಜರಾತ್ ರೂಪಿಸಿದೆ. ಹೀಗಾಗಿ ನಾನು ಯಾವುದನ್ನೂ ಹಗುರವಾಗಿ ಪರಿಗಣಿಸುವುದಿಲ್ಲ. ಏನಾಗಿದೆಯೋ ಅದೆಲ್ಲ ಆಗಿಹೋಗಿದೆ. ಈಗ ನಾನು ವಿಶ್ರಾಂತಿ ಪಡೆಯಬೇಕೇ? ಇಲ್ಲ. ಕಲ್ಯಾಣ ಯೋಜನೆಗಳ ಶೇ 100ರಷ್ಟು ಜಾರಿಯೇ ನನ್ನ ಮುಂದಿರುವ ಗುರಿ' ಎಂದು ಮೋದಿ ಹೇಳಿದ್ದಾರೆ.
ಆದರೆ ಹೀಗೆ ಹೇಳಿರುವ ಪ್ರತಿಪಕ್ಷದ ನಾಯಕ ಯಾರು ಎಂಬುದನ್ನು ಮೋದಿ ಬಹಿರಂಗಪಡಿಸಿಲ್ಲ. ಕಳೆದ ತಿಂಗಳು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ದೆಹಲಿಯಲ್ಲಿ ಮೋದಿ ಅವರನ್ನು ಭೇಟಿಯಾಗಿದ್ದರು. ಭೇಟಿ ವೇಳೆ ಕೇಂದ್ರದ ತನಿಖಾ ಸಂಸ್ಥೆಗಳು ಶಿವಸೇನಾ ಸಂಸದ ಸಂಜಯ್ ರಾವತ್ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಪ್ರಶ್ನಿಸಿದ್ದರು.
Prime Minister Narendra Modi asserted on Thursday that he has no intention of slowing down while recalling an opposition leader's observation that becoming PM twice was enough accomplishment. PM Modi was addressing via video link beneficiaries of Gujarat government's financial assistance schemes for widows, elderly and destitute citizens."One day a very big leader met me. He regularly opposes us politically, but I respect him.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm