ಬ್ರೇಕಿಂಗ್ ನ್ಯೂಸ್
13-05-22 01:20 pm HK Desk News ದೇಶ - ವಿದೇಶ
ನವದೆಹಲಿ, ಮೇ 13 : 'ಮೋದಿ ಜೀ, ನೀವು ಎರಡು ಅವಧಿಗೆ ಪ್ರಧಾನಿಯಾದರೆ ಸಾಕು' ಎಂಬುದಾಗಿ ನನ್ನನ್ನು ಭೇಟಿಯಾದ ಪ್ರತಿಪಕ್ಷದ ನಾಯಕರೊಬ್ಬರು ಹೇಳಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ.
ವಿಧವೆಯರು, ವೃದ್ಧರು ಹಾಗೂ ನಿರ್ಗತಿಕ ನಾಗರಿಕರಿಗೆ ಹಣಕಾಸು ನೆರವು ನೀಡಲು ಗುಜರಾತ್ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಫಲಾನುಭವಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮೋದಿ ಈ ಮಾತುಗಳನ್ನಾಡಿದ್ದಾರೆ.
ಒಂದು ದಿನ ಒಬ್ಬ ಅತಿದೊಡ್ಡ ನಾಯಕರು ನನ್ನನ್ನು ಭೇಟಿಯಾಗಿದ್ದರು. ಅವರು ರಾಜಕೀಯವಾಗಿ ನಮ್ಮನ್ನು ಸದಾ ವಿರೋಧಿಸುತ್ತಿರುವವರು. ಆದರೆ ನಾನು ಅವರನ್ನು ಗೌರವಿಸುತ್ತೇನೆ. ಅವರು ಕೆಲವು ವಿಷಯಗಳ ಬಗ್ಗೆ ಸಂತುಷ್ಟರಾಗಿರಲಿಲ್ಲ. ಹೀಗಾಗಿ ಅವರು ನನ್ನನ್ನು ಭೇಟಿಯಾಗಲು ಬಂದಿದ್ದರು ಎಂದು ಮೋದಿ ಹೇಳಿದ್ದಾರೆ.
'ಅವರು ನನ್ನ ಬಳಿ, ಮೋದಿ ಜೀ, ದೇಶವು ಎರಡು ಬಾರಿ ನಿಮ್ಮನ್ನು ಪ್ರಧಾನಿಯನ್ನಾಗಿ ಮಾಡಿದೆ. ಇದಕ್ಕಿಂತ ಹೆಚ್ಚು ನೀವೇನು ಬಯಸುತ್ತೀರಿ ಎಂದು ಕೇಳಿದ್ದರು. ಒಬ್ಬರು ಎರಡು ಬಾರಿ ಪ್ರಧಾನಿಯಾದರೆ ಎಲ್ಲವನ್ನೂ ಸಾಧಿಸಿದಂತಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.
'ಆದರೆ, ಮೋದಿ ವಿಭಿನ್ನ ಗುಣಗಳಿಂದ ರೂಪಿಸಲ್ಪಟ್ಟವರು ಎಂಬುದು ಅವರಿಗೆ ತಿಳಿದಿರಲಿಲ್ಲ. ಮೋದಿಯನ್ನು ಗುಜರಾತ್ ರೂಪಿಸಿದೆ. ಹೀಗಾಗಿ ನಾನು ಯಾವುದನ್ನೂ ಹಗುರವಾಗಿ ಪರಿಗಣಿಸುವುದಿಲ್ಲ. ಏನಾಗಿದೆಯೋ ಅದೆಲ್ಲ ಆಗಿಹೋಗಿದೆ. ಈಗ ನಾನು ವಿಶ್ರಾಂತಿ ಪಡೆಯಬೇಕೇ? ಇಲ್ಲ. ಕಲ್ಯಾಣ ಯೋಜನೆಗಳ ಶೇ 100ರಷ್ಟು ಜಾರಿಯೇ ನನ್ನ ಮುಂದಿರುವ ಗುರಿ' ಎಂದು ಮೋದಿ ಹೇಳಿದ್ದಾರೆ.
ಆದರೆ ಹೀಗೆ ಹೇಳಿರುವ ಪ್ರತಿಪಕ್ಷದ ನಾಯಕ ಯಾರು ಎಂಬುದನ್ನು ಮೋದಿ ಬಹಿರಂಗಪಡಿಸಿಲ್ಲ. ಕಳೆದ ತಿಂಗಳು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ದೆಹಲಿಯಲ್ಲಿ ಮೋದಿ ಅವರನ್ನು ಭೇಟಿಯಾಗಿದ್ದರು. ಭೇಟಿ ವೇಳೆ ಕೇಂದ್ರದ ತನಿಖಾ ಸಂಸ್ಥೆಗಳು ಶಿವಸೇನಾ ಸಂಸದ ಸಂಜಯ್ ರಾವತ್ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಪ್ರಶ್ನಿಸಿದ್ದರು.
Prime Minister Narendra Modi asserted on Thursday that he has no intention of slowing down while recalling an opposition leader's observation that becoming PM twice was enough accomplishment. PM Modi was addressing via video link beneficiaries of Gujarat government's financial assistance schemes for widows, elderly and destitute citizens."One day a very big leader met me. He regularly opposes us politically, but I respect him.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm