ಬ್ರೇಕಿಂಗ್ ನ್ಯೂಸ್
13-05-22 02:49 pm HK Desk News ದೇಶ - ವಿದೇಶ
ನವದೆಹಲಿ, ಮೇ 13: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಕೂಗಿನ ಮಧ್ಯೆಯೇ ಮಹತ್ವದ ಬದಲಾವಣೆಗೆ ಕೇಂದ್ರ ನಾಯಕತ್ವ ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಸಲುವಾಗಿ ಒಂದು ಕುಟುಂಬ, ಒಂದೇ ಟಿಕೆಟ್ ಎನ್ನುವ ಹೊಸ ನೀತಿಯನ್ನು ಪಕ್ಷದಲ್ಲಿ ಕಡ್ಡಾಯಗೊಳಿಸಲು ನಿಯಮ ತರುವ ಬಗ್ಗೆ ಸುಳಿವು ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸುಳಿವನ್ನು ಹಿರಿಯ ನಾಯಕ ಅಜಯ್ ಮಾಕನ್ ನೀಡಿದ್ದಾರೆ. ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಕಾರ್ಯಕರ್ತನಾಗಿ ಕೆಲಸ ಮಾಡದ ಹೊರತು ನಾಯಕರ ಹತ್ತಿರದ ಸಂಬಂಧಿಗಳಿಗೆ ಟಿಕೆಟ್ ನೀಡುವಂತಿಲ್ಲ ಎಂಬ ನಿಮಯ ತರುವ ಬಗ್ಗೆ ಚಿಂತನೆ ಇದೆ. ಯಾವುದೇ ವ್ಯಕ್ತಿ ನಿರಂತರವಾಗಿ ಒಂದು ಹುದ್ದೆಯಲ್ಲಿದ್ದರೆ, ಅಂಥವರನ್ನು ಹುದ್ದೆಯಿಂದ ಇಳಿಸಲಾಗುವುದು. ಆತ ಮೂರು ವರ್ಷಗಳ ವರೆಗೆ ಹುದ್ದೆ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಬೇಕು. ಆನಂತರ ಮತ್ತೆ ಹಳೆಯ ಹುದ್ದೆಗೆ ಮರಳಲು ಅವಕಾಶ ಇರುತ್ತದೆ ಎಂದು ಅಜಯ್ ಮಾಕನ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿರಿಸಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ರಾಷ್ಟ್ರ ಮಟ್ಟದ ನಾಯಕರು, ಚಿಂತಕರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಪ್ರತಿಯಾಗಿ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇದಕ್ಕಾಗಿ ಶಿಬಿರವನ್ನು ನವ್ ಸಂಕಲ್ಪ್ ಚಿಂತನ್ ಶಿಬಿರ್ ಎಂದು ಹೆಸರಿಸಲಾಗಿದೆ. ಮೇ 13ರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶಿಬಿರಕ್ಕೆ ಚಾಲನೆ ನೀಡಿ, ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಮಹತ್ವದ ಆರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜಕೀಯ, ಸಂಘಟನೆ, ಆರ್ಥಿಕ ನೀತಿ, ಕೃಷಿ, ಯುವ ಜನಾಂಗ ಮತ್ತು ಸಾಮಾಜಿಕ ಕಲ್ಯಾಣ ಈ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ.
Senior Congress leader Ajay Maken said there would be big organisational changes in the party after the three-day brainstorming session - Chintan Shivir, which will be held in Rajashthan's Udhaipur.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm