ಬ್ರೇಕಿಂಗ್ ನ್ಯೂಸ್
13-05-22 02:49 pm HK Desk News ದೇಶ - ವಿದೇಶ
ನವದೆಹಲಿ, ಮೇ 13: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಕೂಗಿನ ಮಧ್ಯೆಯೇ ಮಹತ್ವದ ಬದಲಾವಣೆಗೆ ಕೇಂದ್ರ ನಾಯಕತ್ವ ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಸಲುವಾಗಿ ಒಂದು ಕುಟುಂಬ, ಒಂದೇ ಟಿಕೆಟ್ ಎನ್ನುವ ಹೊಸ ನೀತಿಯನ್ನು ಪಕ್ಷದಲ್ಲಿ ಕಡ್ಡಾಯಗೊಳಿಸಲು ನಿಯಮ ತರುವ ಬಗ್ಗೆ ಸುಳಿವು ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸುಳಿವನ್ನು ಹಿರಿಯ ನಾಯಕ ಅಜಯ್ ಮಾಕನ್ ನೀಡಿದ್ದಾರೆ. ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಕಾರ್ಯಕರ್ತನಾಗಿ ಕೆಲಸ ಮಾಡದ ಹೊರತು ನಾಯಕರ ಹತ್ತಿರದ ಸಂಬಂಧಿಗಳಿಗೆ ಟಿಕೆಟ್ ನೀಡುವಂತಿಲ್ಲ ಎಂಬ ನಿಮಯ ತರುವ ಬಗ್ಗೆ ಚಿಂತನೆ ಇದೆ. ಯಾವುದೇ ವ್ಯಕ್ತಿ ನಿರಂತರವಾಗಿ ಒಂದು ಹುದ್ದೆಯಲ್ಲಿದ್ದರೆ, ಅಂಥವರನ್ನು ಹುದ್ದೆಯಿಂದ ಇಳಿಸಲಾಗುವುದು. ಆತ ಮೂರು ವರ್ಷಗಳ ವರೆಗೆ ಹುದ್ದೆ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಬೇಕು. ಆನಂತರ ಮತ್ತೆ ಹಳೆಯ ಹುದ್ದೆಗೆ ಮರಳಲು ಅವಕಾಶ ಇರುತ್ತದೆ ಎಂದು ಅಜಯ್ ಮಾಕನ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿರಿಸಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ರಾಷ್ಟ್ರ ಮಟ್ಟದ ನಾಯಕರು, ಚಿಂತಕರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಪ್ರತಿಯಾಗಿ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇದಕ್ಕಾಗಿ ಶಿಬಿರವನ್ನು ನವ್ ಸಂಕಲ್ಪ್ ಚಿಂತನ್ ಶಿಬಿರ್ ಎಂದು ಹೆಸರಿಸಲಾಗಿದೆ. ಮೇ 13ರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶಿಬಿರಕ್ಕೆ ಚಾಲನೆ ನೀಡಿ, ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಮಹತ್ವದ ಆರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜಕೀಯ, ಸಂಘಟನೆ, ಆರ್ಥಿಕ ನೀತಿ, ಕೃಷಿ, ಯುವ ಜನಾಂಗ ಮತ್ತು ಸಾಮಾಜಿಕ ಕಲ್ಯಾಣ ಈ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ.
Senior Congress leader Ajay Maken said there would be big organisational changes in the party after the three-day brainstorming session - Chintan Shivir, which will be held in Rajashthan's Udhaipur.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm