ಬ್ರೇಕಿಂಗ್ ನ್ಯೂಸ್
13-05-22 02:49 pm HK Desk News ದೇಶ - ವಿದೇಶ
ನವದೆಹಲಿ, ಮೇ 13: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಕೂಗಿನ ಮಧ್ಯೆಯೇ ಮಹತ್ವದ ಬದಲಾವಣೆಗೆ ಕೇಂದ್ರ ನಾಯಕತ್ವ ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಸಲುವಾಗಿ ಒಂದು ಕುಟುಂಬ, ಒಂದೇ ಟಿಕೆಟ್ ಎನ್ನುವ ಹೊಸ ನೀತಿಯನ್ನು ಪಕ್ಷದಲ್ಲಿ ಕಡ್ಡಾಯಗೊಳಿಸಲು ನಿಯಮ ತರುವ ಬಗ್ಗೆ ಸುಳಿವು ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸುಳಿವನ್ನು ಹಿರಿಯ ನಾಯಕ ಅಜಯ್ ಮಾಕನ್ ನೀಡಿದ್ದಾರೆ. ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಕಾರ್ಯಕರ್ತನಾಗಿ ಕೆಲಸ ಮಾಡದ ಹೊರತು ನಾಯಕರ ಹತ್ತಿರದ ಸಂಬಂಧಿಗಳಿಗೆ ಟಿಕೆಟ್ ನೀಡುವಂತಿಲ್ಲ ಎಂಬ ನಿಮಯ ತರುವ ಬಗ್ಗೆ ಚಿಂತನೆ ಇದೆ. ಯಾವುದೇ ವ್ಯಕ್ತಿ ನಿರಂತರವಾಗಿ ಒಂದು ಹುದ್ದೆಯಲ್ಲಿದ್ದರೆ, ಅಂಥವರನ್ನು ಹುದ್ದೆಯಿಂದ ಇಳಿಸಲಾಗುವುದು. ಆತ ಮೂರು ವರ್ಷಗಳ ವರೆಗೆ ಹುದ್ದೆ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಬೇಕು. ಆನಂತರ ಮತ್ತೆ ಹಳೆಯ ಹುದ್ದೆಗೆ ಮರಳಲು ಅವಕಾಶ ಇರುತ್ತದೆ ಎಂದು ಅಜಯ್ ಮಾಕನ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿರಿಸಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ರಾಷ್ಟ್ರ ಮಟ್ಟದ ನಾಯಕರು, ಚಿಂತಕರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಪ್ರತಿಯಾಗಿ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇದಕ್ಕಾಗಿ ಶಿಬಿರವನ್ನು ನವ್ ಸಂಕಲ್ಪ್ ಚಿಂತನ್ ಶಿಬಿರ್ ಎಂದು ಹೆಸರಿಸಲಾಗಿದೆ. ಮೇ 13ರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶಿಬಿರಕ್ಕೆ ಚಾಲನೆ ನೀಡಿ, ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಮಹತ್ವದ ಆರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜಕೀಯ, ಸಂಘಟನೆ, ಆರ್ಥಿಕ ನೀತಿ, ಕೃಷಿ, ಯುವ ಜನಾಂಗ ಮತ್ತು ಸಾಮಾಜಿಕ ಕಲ್ಯಾಣ ಈ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ.
Senior Congress leader Ajay Maken said there would be big organisational changes in the party after the three-day brainstorming session - Chintan Shivir, which will be held in Rajashthan's Udhaipur.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm