ಬ್ರೇಕಿಂಗ್ ನ್ಯೂಸ್
14-05-22 09:51 pm HK Desk News ದೇಶ - ವಿದೇಶ
ನವದೆಹಲಿ, ಮೇ 14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಹಾರ ಧಾನ್ಯ ವಸ್ತುಗಳಿಗೆ ಬೇಡಿಕೆ ಹೆಚ್ಚಿರುವುದು ಮತ್ತು ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದಿಢೀರ್ ಆಗಿ ಭಾರತ ಸರಕಾರ ಗೋಧಿ ರಫ್ತುನ್ನು ನಿಷೇಧಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಹಾರ ಸಾಮಗ್ರಿಗಳ ಬೆಲೆ ಹೆಚ್ಚಿರುವುದು ಮತ್ತು ನೆರೆಯ ಸಣ್ಣ ಪುಟ್ಟ ರಾಷ್ಟ್ರಗಳಲ್ಲಿ ಆಹಾರ ಪದಾರ್ಥಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದರದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದ್ದರಿಂದ ಭಾರತ ಸರಕಾರ ಈ ಕ್ರಮ ಕೈಗೊಂಡಿದೆ. ಅಲ್ಲದೆ, ಆಹಾರ ಭದ್ರತಾ ಕ್ರಮಗಳಿಗಾಗಿ ಗೋಧಿ ರಫ್ತು ಮಾಡುವುದನ್ನ ಬ್ಯಾನ್ ಮಾಡುತ್ತಿರುವುದಾಗಿ ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹೀಗಿದ್ದರೂ, ನೆರೆ ದೇಶಗಳಲ್ಲಿ ತೀವ್ರ ಆಹಾರ ಕೊರತೆ ಎದುರಿಸುತ್ತಿರುವ ರಾಷ್ಟ್ರಗಳಿಗೆ ಭಾರತ ಸರಕಾರದ ಒಪ್ಪಿಗೆ ಮೇರೆಗೆ ಗೋಧಿ ರಫ್ತು ಮಾಡಲು ಬದ್ಧತೆ ಹೊಂದಿದೆ ಎಂದು ಹೇಳಿದೆ. ಗೋಧಿ ಮತ್ತು ಅದರ ಉಪ ಉತ್ಪನ್ನಗಳ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ಇದರಿಂದಾಗಿ ಪ್ರಗತಿಶೀಲ ದೇಶಗಳು ತೀವ್ರ ತೊಂದರೆಗೆ ಸಿಲುಕಿವೆ. ಈ ಸಂದರ್ಭದಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಗೋಧಿಯನ್ನು ಹಿಡಿದಿಟ್ಟು ಮತ್ತಷ್ಟು ದರ ಏರಿಕೆಗೆ ಕಾರಣವಾಗುತ್ತಿವೆ ಎನ್ನಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಏರಿಳಿತ ಮತ್ತು ಭಾರತದಲ್ಲಿ ಆಹಾರ ಭದ್ರತೆ ಉಳಿಸಿಕೊಳ್ಳುವ ಉಪಕ್ರಮದ ಉದ್ದೇಶದಲ್ಲಿ ಗೋಧಿ ರಫ್ತು ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ ಎನ್ನಲಾಗುತ್ತಿದೆ.
ಭಾರತ 2022-23ರ ಅವಧಿಯಲ್ಲಿ ಹತ್ತು ಮಿಲಿಯನ್ ಟನ್ ಗೋಧಿಯನ್ನು ರಫ್ತು ಮಾಡಲು ಗುರಿ ಇರಿಸಿಕೊಂಡಿದೆ. ಅಲ್ಲದೆ, ಎರಡು ದಿನಗಳ ಹಿಂದೆ ವ್ಯಾಪಾರ ಉದ್ದೇಶಕ್ಕಾಗಿ ಇಂಡೋನೇಶ್ಯಾ, ಟ್ಯುನಿಷಿಯಾ ಮತ್ತಿತರ ಪ್ರಗತಿ ಶೀಲ ದೇಶಗಳಿಗೆ ಭಾರತದಿಂದ ಪ್ರತಿನಿಧಿಗಳನ್ನು ಕಳಿಸಿಕೊಡುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಗೋಧಿ ರಫ್ತನ್ನು ನಿಷೇಧ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ಗೋಧಿ ದಾಸ್ತಾನು ಬಹಳಷ್ಟು ಇದ್ದರೂ, ಗೋಧಿ ಹುಡಿಗೆ 2010ರ ಬಳಿಕ ಇದೇ ಮೊದಲ ಬಾರಿಗೆ ದೇಸಿ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ದರ ಆಗಿದೆ. ಎಪ್ರಿಲ್ ತಿಂಗಳಲ್ಲಿ ಗೋಧಿ ಅಟ್ಟಾ ಬೆಲೆ ಗರಿಷ್ಠ ಹಂತಕ್ಕೆ ತಲುಪಿತ್ತು.
India said it would ban wheat exports, in a move that will add to global inflationary pressure and further strain global food supplies that have been disrupted by the war in Ukraine. “The food security of India, neighboring and other vulnerable countries is at risk,” India’s Directorate General of Foreign Trade said in a notice on Friday explaining the ban.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm