ಬ್ರೇಕಿಂಗ್ ನ್ಯೂಸ್
14-05-22 09:51 pm HK Desk News ದೇಶ - ವಿದೇಶ
ನವದೆಹಲಿ, ಮೇ 14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಹಾರ ಧಾನ್ಯ ವಸ್ತುಗಳಿಗೆ ಬೇಡಿಕೆ ಹೆಚ್ಚಿರುವುದು ಮತ್ತು ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದಿಢೀರ್ ಆಗಿ ಭಾರತ ಸರಕಾರ ಗೋಧಿ ರಫ್ತುನ್ನು ನಿಷೇಧಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಹಾರ ಸಾಮಗ್ರಿಗಳ ಬೆಲೆ ಹೆಚ್ಚಿರುವುದು ಮತ್ತು ನೆರೆಯ ಸಣ್ಣ ಪುಟ್ಟ ರಾಷ್ಟ್ರಗಳಲ್ಲಿ ಆಹಾರ ಪದಾರ್ಥಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದರದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದ್ದರಿಂದ ಭಾರತ ಸರಕಾರ ಈ ಕ್ರಮ ಕೈಗೊಂಡಿದೆ. ಅಲ್ಲದೆ, ಆಹಾರ ಭದ್ರತಾ ಕ್ರಮಗಳಿಗಾಗಿ ಗೋಧಿ ರಫ್ತು ಮಾಡುವುದನ್ನ ಬ್ಯಾನ್ ಮಾಡುತ್ತಿರುವುದಾಗಿ ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹೀಗಿದ್ದರೂ, ನೆರೆ ದೇಶಗಳಲ್ಲಿ ತೀವ್ರ ಆಹಾರ ಕೊರತೆ ಎದುರಿಸುತ್ತಿರುವ ರಾಷ್ಟ್ರಗಳಿಗೆ ಭಾರತ ಸರಕಾರದ ಒಪ್ಪಿಗೆ ಮೇರೆಗೆ ಗೋಧಿ ರಫ್ತು ಮಾಡಲು ಬದ್ಧತೆ ಹೊಂದಿದೆ ಎಂದು ಹೇಳಿದೆ. ಗೋಧಿ ಮತ್ತು ಅದರ ಉಪ ಉತ್ಪನ್ನಗಳ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ಇದರಿಂದಾಗಿ ಪ್ರಗತಿಶೀಲ ದೇಶಗಳು ತೀವ್ರ ತೊಂದರೆಗೆ ಸಿಲುಕಿವೆ. ಈ ಸಂದರ್ಭದಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಗೋಧಿಯನ್ನು ಹಿಡಿದಿಟ್ಟು ಮತ್ತಷ್ಟು ದರ ಏರಿಕೆಗೆ ಕಾರಣವಾಗುತ್ತಿವೆ ಎನ್ನಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಏರಿಳಿತ ಮತ್ತು ಭಾರತದಲ್ಲಿ ಆಹಾರ ಭದ್ರತೆ ಉಳಿಸಿಕೊಳ್ಳುವ ಉಪಕ್ರಮದ ಉದ್ದೇಶದಲ್ಲಿ ಗೋಧಿ ರಫ್ತು ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ ಎನ್ನಲಾಗುತ್ತಿದೆ.
![]()
ಭಾರತ 2022-23ರ ಅವಧಿಯಲ್ಲಿ ಹತ್ತು ಮಿಲಿಯನ್ ಟನ್ ಗೋಧಿಯನ್ನು ರಫ್ತು ಮಾಡಲು ಗುರಿ ಇರಿಸಿಕೊಂಡಿದೆ. ಅಲ್ಲದೆ, ಎರಡು ದಿನಗಳ ಹಿಂದೆ ವ್ಯಾಪಾರ ಉದ್ದೇಶಕ್ಕಾಗಿ ಇಂಡೋನೇಶ್ಯಾ, ಟ್ಯುನಿಷಿಯಾ ಮತ್ತಿತರ ಪ್ರಗತಿ ಶೀಲ ದೇಶಗಳಿಗೆ ಭಾರತದಿಂದ ಪ್ರತಿನಿಧಿಗಳನ್ನು ಕಳಿಸಿಕೊಡುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಗೋಧಿ ರಫ್ತನ್ನು ನಿಷೇಧ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ಗೋಧಿ ದಾಸ್ತಾನು ಬಹಳಷ್ಟು ಇದ್ದರೂ, ಗೋಧಿ ಹುಡಿಗೆ 2010ರ ಬಳಿಕ ಇದೇ ಮೊದಲ ಬಾರಿಗೆ ದೇಸಿ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ದರ ಆಗಿದೆ. ಎಪ್ರಿಲ್ ತಿಂಗಳಲ್ಲಿ ಗೋಧಿ ಅಟ್ಟಾ ಬೆಲೆ ಗರಿಷ್ಠ ಹಂತಕ್ಕೆ ತಲುಪಿತ್ತು.
India said it would ban wheat exports, in a move that will add to global inflationary pressure and further strain global food supplies that have been disrupted by the war in Ukraine. “The food security of India, neighboring and other vulnerable countries is at risk,” India’s Directorate General of Foreign Trade said in a notice on Friday explaining the ban.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm