ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.


"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am