ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.


"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am