ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am