ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm