ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm