ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm