ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.
ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm