ಅತ್ಯಾಚಾರ ಆರೋಪ ; ಅನುರಾಗ್ ಕಶ್ಯಪ್ ಗೆ ಮುಂಬೈ ಪೊಲೀಸರಿಂದ ಸಮನ್ಸ್

30-09-20 04:28 pm       Headline Karnataka News Network   ಸಿನಿಮಾ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್‌ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.

ಮುಂಬೈ, ಸೆ.30: ಕಳೆದ ವಾರ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಹಾಜರಾಗುವಂತೆ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್‌ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.

ತನ್ನ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ಹುರುಳಿಲ್ಲ ಎಂದು ಕಶ್ಯಪ್ ಹೇಳಿದ್ದಾರೆ.

ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಕಶ್ಯಪ್ ಉದ್ದೇಶಿಸಿದ್ದಾರೆ ಎಂದು ಕಶ್ಯಪ್ ಅವರ ವಕೀಲ ಪ್ರಿಯಾಂಕಾ ಖಿಮಾಣಿ ಹೇಳಿದ್ದಾರೆ.

ರಾಜ್ಯಸಭಾ ಸಂಸದ ಹಾಗೂ ಕೇಂದ್ರ ಸಚಿವ ರಾಮದಾಸ್ ಅಠವಳೆ ಜೊತೆಗೂಡಿ ನಟಿ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿಯಾದ ಮರುದಿನವೇ ಪೊಲೀಸರು ಕಶ್ಯಪ್‌ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಕಶ್ಯಪ್‌ರನ್ನು ಬಂಧಿಸಬೇಕೆಂಬ ನಟಿಯ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ರಾಮದಾಸ್,ನಟಿಗೆ ವೈ ಪ್ಲಸ್ ಭದ್ರತೆ ನೀಡುವಂತೆಯೂ ಆಗ್ರಹಿಸಿದರು.