ಬ್ರೇಕಿಂಗ್ ನ್ಯೂಸ್
03-10-20 03:07 pm Headline Karnataka News Network ಸಿನಿಮಾ
ನವ ದೆಹಲಿ, ಅಕ್ಟೋಬರ್ 03 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಒಳಾಂಗಗಳ ಪೋಸ್ಟ್ ಮಾರ್ಟಂ ವರದಿಯನ್ನು ಏಮ್ಸ್ ಪುನರ್ಪರಿಶೀಲಿಸಿ ಸಿಬಿಐಗೆ ನೀಡಿದೆ. ಏಮ್ಸ್ ಪರಿಶೀಲನಾ ವರದಿಯ ಪ್ರಕಾರ ಸುಶಾಂತ್ ಸಿಂಗ್ ದೇಹದಲ್ಲಿ ಯಾವುದೇ ಜೈವಿಕ ವಿಷ ಪತ್ತೆಯಾಗಿಲ್ಲ ಎನ್ನಲಾಗಿದೆ.
ಸುಶಾಂತ್ ಸಾವು ಕೊಲೆ ಅಲ್ಲ, ಅದು ಆತ್ಮಹತ್ಯೆ ಪ್ರಕರಣವಾಗಿದೆ ಎಂದು ಖಾಸಗಿ ಮಾಧ್ಯಮವೊಂದರಲ್ಲಿ ಫೋರೆನ್ಸಿಕ್ ಮಂಡಳಿಯ ಮುಖ್ಯಸ್ಥ ಡಾ.ಸುಧೀರ್ ಗುಪ್ತ ಹೇಳಿದ್ದಾರೆ.
ಏಮ್ಸ್ ವೈದ್ಯರ ತಂಡವು ಅವರಲ್ಲಿ ಲಭ್ಯವಿರುವ ಶೇಕಡಾ 20 ರಷ್ಟು ಒಳಾಂಗಗಳ ಮಾದರಿಯನ್ನು ಆಧರಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಮತ್ತು ಒಳಾಂಗಗಳ ವರದಿಗಳನ್ನು ಮರು ಪರಿಶೀಲನೆ ಮಾಡಿತ್ತು. ಇಷ್ಟೇ ಅಲ್ಲದೆ ವಿಧಿವಿಜ್ಞಾನ ಸಂಸ್ಥೆಗಳು ಲ್ಯಾಪ್ಟಾಪ್, ಎರಡು ಹಾರ್ಡ್ ಡಿಸ್ಕ್, ಕ್ಯಾಮೆರಾ ಮತ್ತು ಎರಡು ಮೊಬೈಲ್ ಫೋನ್ಗಳನ್ನು ಪರೀಕ್ಷಿಸಿವೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸಿಬಿಐ ಆತ್ಮಹತ್ಯೆಯ ದೃಷ್ಟಿಕೋನದಿಂದ ತನ್ನ ತನಿಖೆಯನ್ನು ಮುಂದುವರಿಸಲಿದ್ದು, ಒಂದು ವೇಳೆ ಕೊಲೆಗೆ ಪುರಾವೆಗಳು ಲಭಿಸಿದರೆ ಐಪಿಸಿಯ ಸೆಕ್ಷನ್ 302 ಅಡಿಯಲ್ಲಿ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ . ಆದರೆ, ಸಿಬಿಐ 57 ದಿನಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ ಕೊಲೆಯೆಂದು ಸಾಭೀತಾಗುವಂತಹ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.
34 ವಯಸ್ಸಿನ ಸುಶಾಂತ್ ಜೂ.14ರಂದು ಮುಂಬೈನಲ್ಲಿರುವ ಅವರ ಅಪಾರ್ಟ್ ಮೆಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಹಬ್ಬಿದ್ದವು. ನ್ಯಾಯಕ್ಕಾಗಿ ಅಭಿಯಾನ ನಡೆಸಲಾಗಿತ್ತು. ಸುಶಾಂತ್ ಸಿಂಗ್ ಕುಟುಂಬದವರು ಶಂಕೆ ವ್ಯಕ್ತಪಡಿಸಿದ ಕಾರಣ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ನಿರ್ಣಾಯಕ ಔಷಧೀಯ ಹಾಗೂ ಕಾನೂನು ಅಭಿಪ್ರಾಯವನ್ನು ನೀಡಿದ ನಂತರ ಏಮ್ಸ್ ಸಮಿತಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಹಾಗೂ ಕಡತವನ್ನು ಮುಚ್ಚಿದೆ. ಸಿಬಿಐ ತಮ್ಮ ತನಿಖೆಯೊಂದಿಗೆ ವರದಿಯನ್ನು ದೃಢೀಕರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm