ಬ್ರೇಕಿಂಗ್ ನ್ಯೂಸ್
03-10-20 03:07 pm Headline Karnataka News Network ಸಿನಿಮಾ
ನವ ದೆಹಲಿ, ಅಕ್ಟೋಬರ್ 03 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಒಳಾಂಗಗಳ ಪೋಸ್ಟ್ ಮಾರ್ಟಂ ವರದಿಯನ್ನು ಏಮ್ಸ್ ಪುನರ್ಪರಿಶೀಲಿಸಿ ಸಿಬಿಐಗೆ ನೀಡಿದೆ. ಏಮ್ಸ್ ಪರಿಶೀಲನಾ ವರದಿಯ ಪ್ರಕಾರ ಸುಶಾಂತ್ ಸಿಂಗ್ ದೇಹದಲ್ಲಿ ಯಾವುದೇ ಜೈವಿಕ ವಿಷ ಪತ್ತೆಯಾಗಿಲ್ಲ ಎನ್ನಲಾಗಿದೆ.
ಸುಶಾಂತ್ ಸಾವು ಕೊಲೆ ಅಲ್ಲ, ಅದು ಆತ್ಮಹತ್ಯೆ ಪ್ರಕರಣವಾಗಿದೆ ಎಂದು ಖಾಸಗಿ ಮಾಧ್ಯಮವೊಂದರಲ್ಲಿ ಫೋರೆನ್ಸಿಕ್ ಮಂಡಳಿಯ ಮುಖ್ಯಸ್ಥ ಡಾ.ಸುಧೀರ್ ಗುಪ್ತ ಹೇಳಿದ್ದಾರೆ.
ಏಮ್ಸ್ ವೈದ್ಯರ ತಂಡವು ಅವರಲ್ಲಿ ಲಭ್ಯವಿರುವ ಶೇಕಡಾ 20 ರಷ್ಟು ಒಳಾಂಗಗಳ ಮಾದರಿಯನ್ನು ಆಧರಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಮತ್ತು ಒಳಾಂಗಗಳ ವರದಿಗಳನ್ನು ಮರು ಪರಿಶೀಲನೆ ಮಾಡಿತ್ತು. ಇಷ್ಟೇ ಅಲ್ಲದೆ ವಿಧಿವಿಜ್ಞಾನ ಸಂಸ್ಥೆಗಳು ಲ್ಯಾಪ್ಟಾಪ್, ಎರಡು ಹಾರ್ಡ್ ಡಿಸ್ಕ್, ಕ್ಯಾಮೆರಾ ಮತ್ತು ಎರಡು ಮೊಬೈಲ್ ಫೋನ್ಗಳನ್ನು ಪರೀಕ್ಷಿಸಿವೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಸಿಬಿಐ ಆತ್ಮಹತ್ಯೆಯ ದೃಷ್ಟಿಕೋನದಿಂದ ತನ್ನ ತನಿಖೆಯನ್ನು ಮುಂದುವರಿಸಲಿದ್ದು, ಒಂದು ವೇಳೆ ಕೊಲೆಗೆ ಪುರಾವೆಗಳು ಲಭಿಸಿದರೆ ಐಪಿಸಿಯ ಸೆಕ್ಷನ್ 302 ಅಡಿಯಲ್ಲಿ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ . ಆದರೆ, ಸಿಬಿಐ 57 ದಿನಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ ಕೊಲೆಯೆಂದು ಸಾಭೀತಾಗುವಂತಹ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.
34 ವಯಸ್ಸಿನ ಸುಶಾಂತ್ ಜೂ.14ರಂದು ಮುಂಬೈನಲ್ಲಿರುವ ಅವರ ಅಪಾರ್ಟ್ ಮೆಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಹಬ್ಬಿದ್ದವು. ನ್ಯಾಯಕ್ಕಾಗಿ ಅಭಿಯಾನ ನಡೆಸಲಾಗಿತ್ತು. ಸುಶಾಂತ್ ಸಿಂಗ್ ಕುಟುಂಬದವರು ಶಂಕೆ ವ್ಯಕ್ತಪಡಿಸಿದ ಕಾರಣ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ನಿರ್ಣಾಯಕ ಔಷಧೀಯ ಹಾಗೂ ಕಾನೂನು ಅಭಿಪ್ರಾಯವನ್ನು ನೀಡಿದ ನಂತರ ಏಮ್ಸ್ ಸಮಿತಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಹಾಗೂ ಕಡತವನ್ನು ಮುಚ್ಚಿದೆ. ಸಿಬಿಐ ತಮ್ಮ ತನಿಖೆಯೊಂದಿಗೆ ವರದಿಯನ್ನು ದೃಢೀಕರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm