ಬ್ರೇಕಿಂಗ್ ನ್ಯೂಸ್
            
                        03-10-20 03:07 pm Headline Karnataka News Network ಸಿನಿಮಾ
            ನವ ದೆಹಲಿ, ಅಕ್ಟೋಬರ್ 03 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಒಳಾಂಗಗಳ ಪೋಸ್ಟ್ ಮಾರ್ಟಂ ವರದಿಯನ್ನು ಏಮ್ಸ್ ಪುನರ್ಪರಿಶೀಲಿಸಿ ಸಿಬಿಐಗೆ ನೀಡಿದೆ. ಏಮ್ಸ್ ಪರಿಶೀಲನಾ ವರದಿಯ ಪ್ರಕಾರ ಸುಶಾಂತ್ ಸಿಂಗ್ ದೇಹದಲ್ಲಿ ಯಾವುದೇ ಜೈವಿಕ ವಿಷ ಪತ್ತೆಯಾಗಿಲ್ಲ ಎನ್ನಲಾಗಿದೆ.
ಸುಶಾಂತ್ ಸಾವು ಕೊಲೆ ಅಲ್ಲ, ಅದು ಆತ್ಮಹತ್ಯೆ ಪ್ರಕರಣವಾಗಿದೆ ಎಂದು ಖಾಸಗಿ ಮಾಧ್ಯಮವೊಂದರಲ್ಲಿ ಫೋರೆನ್ಸಿಕ್ ಮಂಡಳಿಯ ಮುಖ್ಯಸ್ಥ ಡಾ.ಸುಧೀರ್ ಗುಪ್ತ ಹೇಳಿದ್ದಾರೆ.
ಏಮ್ಸ್ ವೈದ್ಯರ ತಂಡವು ಅವರಲ್ಲಿ ಲಭ್ಯವಿರುವ ಶೇಕಡಾ 20 ರಷ್ಟು ಒಳಾಂಗಗಳ ಮಾದರಿಯನ್ನು ಆಧರಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಮತ್ತು ಒಳಾಂಗಗಳ ವರದಿಗಳನ್ನು ಮರು ಪರಿಶೀಲನೆ ಮಾಡಿತ್ತು. ಇಷ್ಟೇ ಅಲ್ಲದೆ ವಿಧಿವಿಜ್ಞಾನ ಸಂಸ್ಥೆಗಳು ಲ್ಯಾಪ್ಟಾಪ್, ಎರಡು ಹಾರ್ಡ್ ಡಿಸ್ಕ್, ಕ್ಯಾಮೆರಾ ಮತ್ತು ಎರಡು ಮೊಬೈಲ್ ಫೋನ್ಗಳನ್ನು ಪರೀಕ್ಷಿಸಿವೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸಿಬಿಐ ಆತ್ಮಹತ್ಯೆಯ ದೃಷ್ಟಿಕೋನದಿಂದ ತನ್ನ ತನಿಖೆಯನ್ನು ಮುಂದುವರಿಸಲಿದ್ದು, ಒಂದು ವೇಳೆ ಕೊಲೆಗೆ ಪುರಾವೆಗಳು ಲಭಿಸಿದರೆ ಐಪಿಸಿಯ ಸೆಕ್ಷನ್ 302 ಅಡಿಯಲ್ಲಿ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ . ಆದರೆ, ಸಿಬಿಐ 57 ದಿನಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ ಕೊಲೆಯೆಂದು ಸಾಭೀತಾಗುವಂತಹ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.
34 ವಯಸ್ಸಿನ ಸುಶಾಂತ್ ಜೂ.14ರಂದು ಮುಂಬೈನಲ್ಲಿರುವ ಅವರ ಅಪಾರ್ಟ್ ಮೆಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಹಬ್ಬಿದ್ದವು. ನ್ಯಾಯಕ್ಕಾಗಿ ಅಭಿಯಾನ ನಡೆಸಲಾಗಿತ್ತು. ಸುಶಾಂತ್ ಸಿಂಗ್ ಕುಟುಂಬದವರು ಶಂಕೆ ವ್ಯಕ್ತಪಡಿಸಿದ ಕಾರಣ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ನಿರ್ಣಾಯಕ ಔಷಧೀಯ ಹಾಗೂ ಕಾನೂನು ಅಭಿಪ್ರಾಯವನ್ನು ನೀಡಿದ ನಂತರ ಏಮ್ಸ್ ಸಮಿತಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಹಾಗೂ ಕಡತವನ್ನು ಮುಚ್ಚಿದೆ. ಸಿಬಿಐ ತಮ್ಮ ತನಿಖೆಯೊಂದಿಗೆ ವರದಿಯನ್ನು ದೃಢೀಕರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm