ಬ್ರೇಕಿಂಗ್ ನ್ಯೂಸ್
18-08-22 01:40 pm Source: Vijayakarnataka ಸಿನಿಮಾ
ಆಮಿರ್ ಖಾನ್ ನಟನೆಯ 'ಲಾಲ್ ಸಿಂಗ್ ಛಡ್ಡಾ', ಅಕ್ಷಯ್ ಕುಮಾರ್ 'ರಕ್ಷಾ ಬಂಧನ್' ಸಿನಿಮಾಗಳನ್ನು ಬಾಯ್ಕಾಟ್ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆಲಿಯಾ ಭಟ್, ಕರೀನಾ ಕಪೂರ್ ಮುಂತಾದ ನಟರನ್ನು ಕೆಲ ಕಾರಣಗಳಿಗೆ ಬಾಯ್ಕಾಟ್ ಮಾಡಬೇಕು ಎಂದು ಹೇಳಲಾಗಿತ್ತು. ಈ ಬಗ್ಗೆ ಅರ್ಜುನ್ ಕಪೂರ್ ( Arjun Kapoor ) ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ. ಈ ಮಾತು ಬಿಜೆಪಿಯ ನರೋತ್ತಮ್ ಮಿಶ್ರಾ ( Narottam Mishra ) ಕಿವಿಗೂ ಬಿದ್ದಿದೆ.
ಹ್ಯಾಶ್ಟ್ಯಾಗ್ಗೂ, ರಿಯಾಲಿಟಿಗೂ ಸಂಬಂಧ ಇಲ್ಲದಾಗಿದೆ!
"ನಾವು ತುಂಬ ಸಮಯದಿಂದ ಮೌನವಾಗಿದ್ದು ತಪ್ಪು ಮಾಡಿದೆವು. ನಮ್ಮ ಶಿಸ್ತನ್ನು ವೀಕ್ನೆಸ್ ಆಗಿ ಪರಿಗಣಿಸಲಾಗಿದೆ. ಕೆಲಸ ಮಾತನಾಡಬೇಕು ಎಂದು ನಂಬಿದ್ದೇವೆ, ನಾವು ತುಂಬ ಸಹಿಸಿಕೊಂಡೆವು ಅಂತ ಅನಿಸುತ್ತದೆ, ಅದನ್ನೇ ಜನರು ಈಗ ಬಳಸಿಕೊಂಡಿದ್ದಾರೆ. ನಾವೆಲ್ಲ ಒಟ್ಟಾಗಿ ಪ್ರಾಮಾಣಿಕತೆಯಿಂದ ಏನಾದರೂ ಮಾಡಬೇಕು. ಈಗ ಏನು ಬರೆಯಲಾಗುತ್ತಿದೆಯೋ, ಏನು ಹ್ಯಾಶ್ಟ್ಯಾಗ್ ಕ್ರಿಯೇಟ್ ಮಾಡಲಾಗುತ್ತಿದೆಯೋ ಅದು ರಿಯಾಲಿಟಿಯಿಂದ ತುಂಬ ದೂರ ಇದೆ" ಎಂದು ಅರ್ಜುನ್ ಕಪೂರ್ ಹೇಳಿದ್ದಾರೆ.
ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿಲ್ಲ

"ಚಿತ್ರರಂಗ ಅದರ ಕಾಂತಿಯನ್ನು ಕಳೆದುಕೊಳ್ಳುತ್ತಿದೆ. ನಾವು ಅಂಧರಾಗಿ ಹೋಗಲಿ ಬಿಡಿ ಎನ್ನುವಂತೆ ಇದ್ದೇವೆ. ಥಿಯೇಟರ್ ಓಪನ್ ಆಗುತ್ತಿದ್ದಂತೆ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತದೆ, ಎಲ್ಲವೂ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆವು. ಕಳೆದ ಎರಡು ತಿಂಗಳಿನಿಂದ ಸುಮಾರು ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿಲ್ಲ" ಎಂದಿದ್ದಾರೆ ಅರ್ಜುನ್ ಕಪೂರ್ ಅರ್ಜುನ್ ಕಪೂರ್ ನಟನೆಯ 'ಏಕ್ ವಿಲನ್ ರಿಟರ್ನ್ಸ್' ಸಿನಿಮಾ ಚೆನ್ನಾಗಿ ಕಮಾಯಿ ಮಾಡಿರಲಿಲ್ಲ. ಒಟ್ಟೂ 40 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.
ಬಿಜೆಪಿ ನರೋತ್ತಮ್ ಮಿಶ್ರಾ ಹೇಳಿದ್ದೇನು?

ಅರ್ಜುನ್ ಕಪೂರ್ ಅವರ ಮಾತುಗಳನ್ನು ಕೇಳಿಸಿಕೊಂಡ ಬಿಜೆಪಿಯ ನರೋತ್ತಮ್ ಮಿಶ್ರಾ ಅವರು, "ನಟ ಅರ್ಜುನ್ ಕಪೂರ್ ಅವರು ಸಮಾಜಕ್ಕೆ ಧಮ್ಕಿ ಹಾಕೋದು ಸರಿಯಲ್ಲ. ಸಾರ್ವಜನಿಕರಿಗೆ ಬೆದರಿಕೆ ಹಾಕುವ ಬದಲು, ನಟನೆ ಬಗ್ಗೆ ಗಮನ ಕೊಡಲಿ. ತಮ್ಮ ಸಿನಿಮಾಗಳಲ್ಲಿ ಹಿಂದೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಕೆಲ ಗ್ಯಾಂಗ್ ಸಾರ್ವಜನಿಕರಿಗೆ ಬಾಯ್ಕಾಟ್ ವಿಚಾರವಾಗಿ ಬೆದರಿಕೆಯನ್ನು ಏಕೆ ಹಾಕುತ್ತಾರೆ?" ಎಂದು ಪ್ರಶ್ನೆ ಮಾಡಿದ್ದಾರೆ.
ಅರ್ಜುನ್ ಕಪೂರ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬಂದ ಕಾಮೆಂಟ್ಸ್ ಇಂತಿವೆ
Narottam Mishra Reaction On Arjun Kapoor Opinion About Boycott Trend.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm