ಬ್ರೇಕಿಂಗ್ ನ್ಯೂಸ್
25-08-22 03:09 pm Source: Vijayakarnataka ಸಿನಿಮಾ
ಕಿಚ್ಚ ಸುದೀಪ್ ( Kiccha Sudeep ) ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ನಲ್ಲಿ ಮೂಡಿಬಂದ 'ವಿಕ್ರಾಂತ್ ರೋಣ' ಸಿನಿಮಾ ( Vikrant Rona Movie ) ಜುಲೈ 28 ರಂದು ವಿಶ್ವದಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ ಈ ಸಿನಿಮಾ ಓಟಿಟಿಗೆ ಲಗ್ಗೆ ಇಡ್ತಿದೆ.
ಕಿಚ್ಚನ ಹುಟ್ಟುಹಬ್ಬಕ್ಕೆ ಗುಮ್ಮನ ಆಗಮನ
ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನುಮದಿನ. ಈ ದಿನದಂದು ಜೀ5ಕ್ಕೆ ಗುಮ್ಮ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾನೆ. ಅದಕ್ಕೂ ಮುನ್ನ ಜೀ5 ಸ್ಪೆಷಲ್ ಟ್ರೇಲರ್ವೊಂದನ್ನು ಅನಾವರಣ ಮಾಡಲಿದೆ. ಕನ್ನಡದಲ್ಲಿ ಮಾತ್ರ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದ್ದು, ಶೀಘ್ರದಲ್ಲಿ ಬೇರೆ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
![]()
ಜಾಕ್ ಮಂಜು ನಿರ್ಮಾಣದಲ್ಲಿ ಅದ್ದೂರಿಯಾಗಿ ತಯಾರಾಗಿದ್ದ 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಬಾಲಿವುಡ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್ ಸುದೀಪ್ ಜೊತೆಗೆ ಹೆಜ್ಜೆ ಹಾಕಿದ್ದ ರಾ ರಾ ರಕ್ಕಮ್ಮ ಹಾಡು ಸೂಪರ್ ಹಿಟ್ ಲಿಸ್ಟ್ ಸೇರಿತ್ತು. ಸ್ಪೆಷಲ್ ಪಾತ್ರವೊಂದರಲ್ಲಿಯೂ ಕಾಣಿಸಿಕೊಂಡಿದ್ದ ಜಾಕ್ಗೆ ಕನ್ನಡಿಗರು ಮನಸೋತಿದ್ದರು.
ನಿರೂಪ್ ಭಂಡಾರಿ, ನೀತಾ ಅಶೋಕ್, ಮಿಲನಾ ನಾಗರಾಜ್, ಮಧುಸೂದನ್ ರಾವ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ಸಂಗೀತ ನಿರ್ದೇಶನ ಮೋಡಿ ಮಾಡಿತ್ತು. 3D ಅವತರಣಿಕೆಯಲ್ಲಿ ಪಂಚ ಭಾಷೆಯಲ್ಲಿ ರಿಲೀಸ್ ಆದ 'ವಿಕ್ರಾಂತ್ ರೋಣ' ಈಗ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿದ್ದು, ಥಿಯೇಟರ್ನಲ್ಲಿ ಮಿಸ್ ಮಾಡಿಕೊಂಡವರು ಮನೆಯಲ್ಲಿ ಇಡೀ ಮನೆ ಮಂದಿ ಜೊತೆ ಕುಳಿತು ಸಿನಿಮಾ ಕಣ್ತುಂಬಿಕೊಳ್ಳಬಹುದು.

'ವಿಕ್ರಾಂತ್ ರೋಣ' ಸಿನಿಮಾ ಬಗ್ಗೆ ಪರ ವಿರೋಧ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಚಿತ್ರವು ರಂಗಿತರಂಗ 2 ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು. ‘ವಿಕ್ರಾಂತ್ ರೋಣ’ ಚಿತ್ರದ ವಿಶುವಲ್ಸ್, ಗ್ರಾಫಿಕ್ಸ್, ಮೇಕಿಂಗ್, ಕ್ಯಾಮರಾ ವರ್ಕ್ ಹಾಗೂ ಸೆಟ್ ವರ್ಕ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ರಿಲೀಸ್ ಆದ ನಾಲ್ಕು ದಿನಗಳಲ್ಲಿ ‘ವಿಕ್ರಾಂತ್ ರೋಣ’ ಚಿತ್ರ 100 ಕೋಟಿ ಕ್ಲಬ್ ಸೇರಿದೆ ಎಂದು ವರದಿಯಾಗಿತ್ತು.
Kiccha Sudeep Jacqueline Fernandez Starrer Vikrant Rona Movie Release On Zee 5 September 2.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm