Shivarajkumar Prabhudeva Starrer New Movie Shooting Starts In Bengaluru.
">ಬ್ರೇಕಿಂಗ್ ನ್ಯೂಸ್
29-08-22 03:02 pm Source: Vijayakarnataka ಸಿನಿಮಾ
'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.
ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್ಲೈನ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.
![]()
ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್’, ‘ಜೇಮ್ಸ್’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್ ಆಗಿಲ್ಲ.
ಅಂದಹಾಗೆ, ಇದು ಹಳ್ಳಿ ಬ್ಯಾಕ್ಗ್ರೌಂಡ್ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.
Shivarajkumar Prabhudeva Starrer New Movie Shooting Starts In Bengaluru.
26-11-25 10:48 pm
Bangalore Correspondent
ಸಿಎಂ ಫೈಟ್, ಒಕ್ಕಲಿಗ ಸ್ವಾಮೀಜಿಗಳು ಅಖಾಡಕ್ಕೆ, ಡಿಕೆ...
26-11-25 09:41 pm
ಅಪ್ರಾಪ್ತ ಬಾಲಕಿಯರ ಮೇಲೆ ರೇಪ್ ಕೇಸ್ ; ಮುರುಘಾ ಶ್ರೀ...
26-11-25 05:53 pm
ಭೀಕರ ಕಾರು ಅಪಘಾತ ; ಹಿರಿಯ ಐಎಎಸ್ ಅಧಿಕಾರಿ, ಬೆಸ್ಕಾ...
25-11-25 09:49 pm
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm