Shivarajkumar Prabhudeva Starrer New Movie Shooting Starts In Bengaluru.
">ಬ್ರೇಕಿಂಗ್ ನ್ಯೂಸ್
29-08-22 03:02 pm Source: Vijayakarnataka ಸಿನಿಮಾ
'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.
ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್ಲೈನ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.
![]()
ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್’, ‘ಜೇಮ್ಸ್’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್ ಆಗಿಲ್ಲ.
ಅಂದಹಾಗೆ, ಇದು ಹಳ್ಳಿ ಬ್ಯಾಕ್ಗ್ರೌಂಡ್ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.
Shivarajkumar Prabhudeva Starrer New Movie Shooting Starts In Bengaluru.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm