Shivarajkumar Prabhudeva Starrer New Movie Shooting Starts In Bengaluru.
">ಬ್ರೇಕಿಂಗ್ ನ್ಯೂಸ್
29-08-22 03:02 pm Source: Vijayakarnataka ಸಿನಿಮಾ
'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.
ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್ಲೈನ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.
![]()
ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್’, ‘ಜೇಮ್ಸ್’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್ ಆಗಿಲ್ಲ.
ಅಂದಹಾಗೆ, ಇದು ಹಳ್ಳಿ ಬ್ಯಾಕ್ಗ್ರೌಂಡ್ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.
Shivarajkumar Prabhudeva Starrer New Movie Shooting Starts In Bengaluru.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm