Cadaver Movie Actress Amala Paul Files Harassment Case Against Ex Friend Bhavninder Singh.
">ಬ್ರೇಕಿಂಗ್ ನ್ಯೂಸ್
01-09-22 02:08 pm Source: Vijayakarnataka ಸಿನಿಮಾ
ನಟಿ ಅಮಲಾ ಪೌಲ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾರಣ, ಮಾಜಿ ಬಾಯ್ಫ್ರೆಂಡ್ ಭವಿಂದರ್ ಸಿಂಗ್! ಎಲ್ಲರಿಗೂ ಗೊತ್ತಿರುವಂತೆ ಭವ್ನಿಂದರ್ ಸಿಂಗ್ ಜೊತೆಗೆ ಅಮಲಾ ಸ್ನೇಹ ಬೆಳೆಸಿದ್ದರು. ಇಬ್ಬರು ಮದುವೆ ಕೂಡ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಮಧ್ಯೆ ಇಬ್ಬರ ನಡುವಿನ ಸ್ನೇಹ ಹಳಸಿತು. ದೂರ ದೂರ ಆಗಿದ್ದ ಈ ಜೋಡಿ ಈಗ ಮತ್ತೆ ಸದ್ದು ಮಾಡುತ್ತಿದೆ. ಭವ್ನಿಂದರ್ ಸಿಂಗ್ ವಿರುದ್ಧ ಅಮಲಾ ದೂರು ನೀಡಿದ್ದಾರೆ!
ಭವಿಂದರ್ ವಿರುದ್ಧ ದೌರ್ಜನ್ಯ ಕೇಸ್
ಮಾಜಿ ಸ್ನೇಹಿತ ಭವ್ನಿಂದರ್ ವಿರುದ್ಧ ಅಮಲಾ ಪೌಲ್ ದೌರ್ಜನ್ಯ, ವಂಚನೆ ಕೇಸ್ ದಾಖಲಿಸಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ವಿಲ್ಲುಪುರಂ ಜಿಲ್ಲೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು, ಅಮಲಾ ನೀಡಿದ ದೂರಿನ ಅನ್ವಯ ಭವ್ನಿಂದರ್ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಏನಿದು ಪ್ರಕರಣ?
2018ರಲ್ಲಿ ಅಮಲಾ ಮತ್ತು ಭವ್ನಿಂದರ್ ಜಂಟಿಯಾಗಿ ಒಂದು ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದರು. ಆದರೆ ಈ ಜೋಡಿ ಕಾರಣಾಂತರಗಳಿಂದ ದೂರವಾಯಿತು. ಆದ್ದರಿಂದ ಕೊನೆಗೆ ಈ ಪ್ರೊಡಕ್ಷನ್ ಹೌಸ್ ಅನ್ನು ಅಮಲಾ ಒಬ್ಬರೇ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈಚೆಗಷ್ಟೇ 'ಕಡವೆರ್' ಅನ್ನೋ ಸಿನಿಮಾವನ್ನು ಇದೇ ಬ್ಯಾನರ್ ಮೂಲಕ ಅಮಲಾ ಪೌಲ್ ನಿರ್ಮಿಸಿದ್ದಾರೆ. ಆದರೆ ಈ ಮಧ್ಯೆ ಭವ್ನಿಂದರ್ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಮಲಾಗೆ ಸಾಕಷ್ಟು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಸಾಕಷ್ಟು ಹಣವನ್ನು ಲಪಟಾಯಿಸಿದ್ದಾರೆ ಎನ್ನಲಾಗುತ್ತಿದೆ. ಅದರ ಜೊತೆಗೆ ತಮಗೆ ಸಾಕಷ್ಟು ಬೆದರಿಕೆ ಹಾಕುತ್ತಿದ್ದು, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾನೆ ಎಂದು ಭವ್ನಿಂದರ್ ವಿರುದ್ಧ ಅಮಲಾ ಆರೋಪ ಮಾಡಿದ್ದಾರೆ.

ಅಲ್ಲದೆ, ಹಣಕ್ಕಾಗಿ ಭವ್ನಿಂದರ್ ಬೇಡಿಕೆ ಇಡುತ್ತಿದ್ದಾನೆ. ಹಣ ನೀಡದಿದ್ದರೆ ತನ್ನ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಅಮಲಾ ಪೌಲ್ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಭವ್ನಿಂದರ್ ಸಿಂಗ್ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಂದಹಾಗೆ, ಬಹುಭಾಷಾ ನಟಿಯಾಗಿರುವ ಅಮಲಾ ಪೌಲ್, 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡಕ್ಕೂ ಎಂಟ್ರಿ ನೀಡಿದ್ದರು. ನಿರ್ದೇಶಕ ಎ.ಎಲ್. ವಿಜಯ್ ಜೊತೆಗೆ ಅಮಲಾ ಮದುವೆ ಆಗಿತ್ತು. ಆದರೆ ಕೆಲವೇ ವರ್ಷಗಳಲ್ಲಿ ಹೊಂದಾಣಿಕೆ ಕೊರತೆಯಿಂದ ವಿಜಯ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು ನಟಿ ಅಮಲಾ ಪೌಲ್. ಸದ್ಯ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಅಮಲಾ, ಈಗ ಮಾಹಿ ಸ್ನೇಹಿತನ ಕುತಂತ್ರದಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.
Cadaver Movie Actress Amala Paul Files Harassment Case Against Ex Friend Bhavninder Singh.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm