ಬ್ರೇಕಿಂಗ್ ನ್ಯೂಸ್
05-09-22 01:34 pm Source: Vijayakarnataka ಸಿನಿಮಾ
ಕನ್ನಡ ಸಿನಿಮಾಗಳಿಗೆ ಇತ್ತೀಚೆಗೆ ಪರಭಾಷೆಗಳಲ್ಲಿ ಬೇಡಿಕೆ ಸೃಷ್ಟಿಯಾಗುತ್ತಿವೆ. ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಲವ್ 360’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಈಗ ಈ ಸಿನಿಮಾ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗುತ್ತಿದೆ ಎಂದು ಸುದ್ದಿಯಾಗಿದೆ.
ಶಶಾಂಕ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಹೊಸತನದ ಕಥೆಯಿಂದ ಗಮನ ಸೆಳೆದಿತ್ತು. ಈ ಸಿನಿಮಾ ಮೂಲಕ ಪ್ರವೀಣ್ ಎಂಬ ಯುವಕ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಸಿನಿಮಾವನ್ನು ಈಗ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕರು ರಿಮೇಕ್ ಮಾಡಲು ಆಸಕ್ತಿ ತೋರಿಸಿದ್ದಾರೆ. ಶಶಾಂಕ್ ಅವರಿಗೆ ನಿರ್ದೇಶನ ಮಾಡಲು ಆಫರ್ ಸಹ ನೀಡಿದ್ದಾರಂತೆ.

‘ಲವ್ 360 ಸಿನಿಮಾದ ಕಥೆ ಮತ್ತು ಮೇಕಿಂಗ್ ಅನ್ನು ಇಷ್ಟಪಟ್ಟು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ರಿಮೇಕ್ ಮಾಡಲು ಮುಂದೆ ಬಂದಿದೆ. ತಮಿಳಿಗೂ ಸಹ ಒಂದಷ್ಟು ಮಂದಿ ಕೇಳಿದ್ದಾರೆ. ಸದ್ಯದಲ್ಲೇ ಎಲ್ಲವೂ ಫೈನಲ್ ಆಗಲಿದೆ’ಎಂದು ಹೇಳುತ್ತಾರೆ ಶಶಾಂಕ್.

ಜನ ಗೆಲ್ಲಿಸಿದ ಸಿನಿಮಾ ಈ ಸಿನಿಮಾ ಬಿಡುಗಡೆಯಾಗಿ ಮೊದಲ ಮೂರು ದಿನಗಳ ಕಾಲ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲಿಲ್ಲ ಎಂದು ಶಶಾಂಕ್ ಬೇಸರದಿಂದ ವಿಡಿಯೊವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಆ ವಿಡಿಯೊ ವೈರಲ್ ಆಗಿ ಸಿನಿಮಾಗೆ ಜನ ಬರಲಾರಂಭಿಸಿದರು. ವಿಶೇಷ ಎಂದರೆ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದ್ದಲ್ಲದೆ, ಜನಮನವನ್ನು ಸಹ ಗೆದ್ದಿತು. ಹಾಗಾಗಿ ಶಶಾಂಕ್ ಕನ್ನಡಿಗರಿಗೆ ಧನ್ಯವಾದ ಹೇಳಿ ಒಂದು ವಿಡಿಯೊವನ್ನು ಹರಿ ಬಿಟ್ಟಿದ್ದಾರೆ.

‘ಕನ್ನಡಿಗರು ಸಿನಿಮಾವನ್ನು ಗೆಲ್ಲಿಸಿದ್ದಾರೆ. ಒಳ್ಳೆಯ ಕಂಟೆಂಟ್ ಇರುವ ಸಿನಿಮಾಗಳನ್ನು ಮಾಡಿದರೆ ಎಂದಿಗೂ ಅವರು ಕೈ ಬಿಡುವುದಿಲ್ಲ ಎಂಬುದನ್ನು ನಿರೂಪಿಸಿದ್ದಾರೆ. ‘ಲವ್ 360’ ತಂಡದಿಂದ ಸಿನಿಮಾ ನೋಡಿದ ಎಲ್ಲರಿಗೂ ಧನ್ಯವಾದ. ಈ ಸಿನಿಮಾ ಹಿಟ್ ಆಗಲು ಹಲವು ಕಾರಣಗಳಿವೆ. ಸಿನಿಮಾದಲ್ಲಿನ ಹಾಡುಗಳು ಮತ್ತು ನನ್ನ ಕಥಾ ನಾಯಕ ಪ್ರವೀಣ್ ಮತ್ತು ನಾಯಕಿ ರಚನಾ ಇಂದರ್ ಅವರ ನಟನೆಯೂ ಕಾರಣ’ ಎಂದು ಹೇಳಿದ್ದಾರೆ ಶಶಾಂಕ್.ಒಟ್ಟಾರೆ ಕನ್ನಡಿಗರು ಇಷ್ಟಪಟ್ಟ ಸಿನಿಮಾಗಳು ಪರಭಾಷೆಗೂ ಹೋಗುತ್ತಿರುವುದು ಸಹಜವಾಗಿ ಕನ್ನಡ ಸಿನಿಮಾ ಪ್ರೇಮಿಗಳಿಗೆ ಸಂತಸವಾಗಿದೆ.
"ರಿಮೇಕ್ಗಾಗಿ ಬೇಡಿಕೆ ಬಂದಿದೆ. ಸದ್ಯದಲ್ಲೇ ಯಾರು ಮಾಡುತ್ತಾರೆ ಎಂಬ ಬಗ್ಗೆ ವಿವರ ನೀಡುತ್ತೇವೆ" ಎಂದಿದ್ದಾರೆ ನಿರ್ದೇಶಕ ಶಶಾಂಕ್
Demand For Director Shashank Love 360 Movie Remake
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm