ಬ್ರೇಕಿಂಗ್ ನ್ಯೂಸ್
05-09-22 01:34 pm Source: Vijayakarnataka ಸಿನಿಮಾ
ಕನ್ನಡ ಸಿನಿಮಾಗಳಿಗೆ ಇತ್ತೀಚೆಗೆ ಪರಭಾಷೆಗಳಲ್ಲಿ ಬೇಡಿಕೆ ಸೃಷ್ಟಿಯಾಗುತ್ತಿವೆ. ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಲವ್ 360’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಈಗ ಈ ಸಿನಿಮಾ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗುತ್ತಿದೆ ಎಂದು ಸುದ್ದಿಯಾಗಿದೆ.
ಶಶಾಂಕ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಹೊಸತನದ ಕಥೆಯಿಂದ ಗಮನ ಸೆಳೆದಿತ್ತು. ಈ ಸಿನಿಮಾ ಮೂಲಕ ಪ್ರವೀಣ್ ಎಂಬ ಯುವಕ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಸಿನಿಮಾವನ್ನು ಈಗ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕರು ರಿಮೇಕ್ ಮಾಡಲು ಆಸಕ್ತಿ ತೋರಿಸಿದ್ದಾರೆ. ಶಶಾಂಕ್ ಅವರಿಗೆ ನಿರ್ದೇಶನ ಮಾಡಲು ಆಫರ್ ಸಹ ನೀಡಿದ್ದಾರಂತೆ.

‘ಲವ್ 360 ಸಿನಿಮಾದ ಕಥೆ ಮತ್ತು ಮೇಕಿಂಗ್ ಅನ್ನು ಇಷ್ಟಪಟ್ಟು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ರಿಮೇಕ್ ಮಾಡಲು ಮುಂದೆ ಬಂದಿದೆ. ತಮಿಳಿಗೂ ಸಹ ಒಂದಷ್ಟು ಮಂದಿ ಕೇಳಿದ್ದಾರೆ. ಸದ್ಯದಲ್ಲೇ ಎಲ್ಲವೂ ಫೈನಲ್ ಆಗಲಿದೆ’ಎಂದು ಹೇಳುತ್ತಾರೆ ಶಶಾಂಕ್.

ಜನ ಗೆಲ್ಲಿಸಿದ ಸಿನಿಮಾ ಈ ಸಿನಿಮಾ ಬಿಡುಗಡೆಯಾಗಿ ಮೊದಲ ಮೂರು ದಿನಗಳ ಕಾಲ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲಿಲ್ಲ ಎಂದು ಶಶಾಂಕ್ ಬೇಸರದಿಂದ ವಿಡಿಯೊವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಆ ವಿಡಿಯೊ ವೈರಲ್ ಆಗಿ ಸಿನಿಮಾಗೆ ಜನ ಬರಲಾರಂಭಿಸಿದರು. ವಿಶೇಷ ಎಂದರೆ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದ್ದಲ್ಲದೆ, ಜನಮನವನ್ನು ಸಹ ಗೆದ್ದಿತು. ಹಾಗಾಗಿ ಶಶಾಂಕ್ ಕನ್ನಡಿಗರಿಗೆ ಧನ್ಯವಾದ ಹೇಳಿ ಒಂದು ವಿಡಿಯೊವನ್ನು ಹರಿ ಬಿಟ್ಟಿದ್ದಾರೆ.

‘ಕನ್ನಡಿಗರು ಸಿನಿಮಾವನ್ನು ಗೆಲ್ಲಿಸಿದ್ದಾರೆ. ಒಳ್ಳೆಯ ಕಂಟೆಂಟ್ ಇರುವ ಸಿನಿಮಾಗಳನ್ನು ಮಾಡಿದರೆ ಎಂದಿಗೂ ಅವರು ಕೈ ಬಿಡುವುದಿಲ್ಲ ಎಂಬುದನ್ನು ನಿರೂಪಿಸಿದ್ದಾರೆ. ‘ಲವ್ 360’ ತಂಡದಿಂದ ಸಿನಿಮಾ ನೋಡಿದ ಎಲ್ಲರಿಗೂ ಧನ್ಯವಾದ. ಈ ಸಿನಿಮಾ ಹಿಟ್ ಆಗಲು ಹಲವು ಕಾರಣಗಳಿವೆ. ಸಿನಿಮಾದಲ್ಲಿನ ಹಾಡುಗಳು ಮತ್ತು ನನ್ನ ಕಥಾ ನಾಯಕ ಪ್ರವೀಣ್ ಮತ್ತು ನಾಯಕಿ ರಚನಾ ಇಂದರ್ ಅವರ ನಟನೆಯೂ ಕಾರಣ’ ಎಂದು ಹೇಳಿದ್ದಾರೆ ಶಶಾಂಕ್.ಒಟ್ಟಾರೆ ಕನ್ನಡಿಗರು ಇಷ್ಟಪಟ್ಟ ಸಿನಿಮಾಗಳು ಪರಭಾಷೆಗೂ ಹೋಗುತ್ತಿರುವುದು ಸಹಜವಾಗಿ ಕನ್ನಡ ಸಿನಿಮಾ ಪ್ರೇಮಿಗಳಿಗೆ ಸಂತಸವಾಗಿದೆ.
"ರಿಮೇಕ್ಗಾಗಿ ಬೇಡಿಕೆ ಬಂದಿದೆ. ಸದ್ಯದಲ್ಲೇ ಯಾರು ಮಾಡುತ್ತಾರೆ ಎಂಬ ಬಗ್ಗೆ ವಿವರ ನೀಡುತ್ತೇವೆ" ಎಂದಿದ್ದಾರೆ ನಿರ್ದೇಶಕ ಶಶಾಂಕ್
Demand For Director Shashank Love 360 Movie Remake
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm