ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.
ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm