ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm