ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm