ಬ್ರೇಕಿಂಗ್ ನ್ಯೂಸ್
27-09-22 01:44 pm Source: Vijayakarnataka ಸಿನಿಮಾ
ಕಪಿಲ್ ಶರ್ಮಾ ಶೋ ( Kapil Sharma ) ದಕ್ಷಿಣ ಭಾರತದ ಸಿನಿಮಾಗಳನ್ನು ಹಿಂದಿ ಜನರಿಗೆ ಮುಟ್ಟಿಸಲು ಇರುವ ಬಲವಾದ ವೇದಿಕೆ ಎನ್ನಬಹುದು. ಐಶ್ವರ್ಯಾ ರೈ ಬಚ್ಚನ್, ಕಾರ್ತಿ, ಜಯಂ ರವಿ, ವಿಕ್ರಮ್, ತ್ರಿಷಾ ನಟನೆಯ 'ಪೊನ್ನಿಯನ್ ಸೆಲ್ವನ್' ಸಿನಿಮಾ ( Ponniyin Selvan ) ತಂಡ ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ. ಅಂತೆಯೇ ಈ ತಂಡ ಕಪಿಲ್ ಶರ್ಮಾ ಶೋನಲ್ಲಿ ಭಾಗವಹಿಸಿತ್ತು.
ಕಪಿಲ್ ಶರ್ಮಾ ಅವರು ಎಂದಿನಂತೆ ತಮಿಳು ನಟ ವಿಕ್ರಮ್ ಅವರ ಕಾಲೆಳೆದಿದ್ದಾರೆ. "ಒಂದಿನ ಕಪಿಲ್ ಶರ್ಮಾ ಅವರ ಶೋಗೆ ಹೋಗ್ತೀನಿ ಅಂತ ಅಂದುಕೊಂಡಿದ್ರಾ?" ಎಂದು ಕಪಿಲ್ ಶರ್ಮಾ ಕೇಳಿದ್ದಾರೆ. ಆಗ ಮಾತನಾಡಿದ ವಿಕ್ರಮ್, "ನಾನು ಆ ರೀತಿ ಯೋಚನೆ ಮಾಡಿರಲಿಲ್ಲ. 1976ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ನೀವು ಆಗ ಹುಟ್ಟಿರಲಿಲ್ಲ ಅಲ್ವಾ? ಆಗಲೇ ನಿಮ್ಮ ಶೋಗೆ ನಾನು ಬರ್ತೀನಿ ಅಂತ ಬರೆಯಲಾಗಿತ್ತು" ಎಂದು ಉತ್ತರ ನೀಡಿದ್ದಾರೆ.

ವಿಕ್ರಮ್ ಅವರಿಗೆ ಟ್ವಿಟ್ಟರ್ ಬಳಕೆಯ ಕುರಿತು ಕಪಿಲ್ ಶರ್ಮಾ ಸಲಹೆ ನೀಡಿದ್ದು, "ಇತ್ತೀಚೆಗೆ ನೀವು ಟ್ವಿಟ್ಟರ್ ಬಳಸುತ್ತಿದ್ದೀರಿ ಅಲ್ಲವೇ..ನಿಮಗೆ ಟ್ವಿಟ್ಟರ್ ಬಗ್ಗೆ ನಾನು ಒಂದು ವಿಷಯ ಹೇಳಬೇಕಿದೆ. ಸ್ವಲ್ಪ ವಿಸ್ಕಿ ತಗೊಂಡ ಬಳಿಕ ಟ್ವಿಟ್ಟರ್ ರಿಸ್ಕಿ ಆಗತ್ತೆ, ಇದು ನನ್ನ ವೈಯಕ್ತಿಕ ಅನುಭವ" ಎಂದು ಹೇಳಿದ್ದಾರೆ.
"ಸಾಹಸ ದೃಶ್ಯ ಮಾಡುವಾಗ ನನ್ನ ಅಕ್ಕ ಪಕ್ಕದಲ್ಲಿ ಯಾರೂ ಖಳನಟರು ಇರಲಿಲ್ಲ. ನನ್ನ ಧೋತಿಯೇ ವಿಲನ್ ಆಗಿತ್ತು" ಎಂದಿದ್ದಾರೆ ಕಾರ್ತಿ

ನಟಿ ತ್ರಿಷಾ ಅವರು ಕಪಿಲ್ ಜೀ ನೀವು ಆ ರೀತಿ ಹೇಳಿದ್ದಕ್ಕೆ ಐ ಲವ್ ಯು ಎಂದಿದ್ದಾರೆ. ಆಗ ಕಪಿಲ್, "ನೀವು ಐ ಲವ್ ಯು ಎಂದರೆ ನಾನು ಹಿಂದೆ ಹಿಂದೆ ಬಂದುಬಿಡ್ತೀನಿ" ಎಂದು ಹೇಳಿ ನಗೆಚಟಾಕಿ ಹಾರಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಪ್ರಾಬಲ್ಯ ಮೆರೆದಿದ್ದ ಚೋಳರ ಇತಿಹಾಸ ಹೇಳುವ ಕಥೆಯೇ ‘ಪೊನ್ನಿಯನ್ ಸೆಲ್ವನ್’ ಸಿನಿಮಾದ ಒನ್ಲೈನ್ ಸ್ಟೋರಿ. ಕಲ್ಕಿ ಕೃಷ್ಣಮೂರ್ತಿ ಬರೆದಿರುವ ‘ಪೊನ್ನಿಯನ್ ಸೆಲ್ವನ್’ ಎಂಬ ಐತಿಹಾಸಿಕ ಪುಸ್ತಕವನ್ನು ಆಧರಿಸಿರುವ ಚಿತ್ರವಿದು. ‘ಪೊನ್ನಿಯನ್ ಸೆಲ್ವನ್’ ಚಿತ್ರವನ್ನು 500 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದ್ದು, 9ನೇ ಶತಮಾನದ ಕಥಾನಕ ಇರುವುದರಿಂದ ಅಂದಿನ ಕಾಲಘಟದ ಸೆಟ್ ಮತ್ತು ಕಾಸ್ಟ್ಯೂಮ್ಸ್ಗಳನ್ನು ಚಿತ್ರದಲ್ಲಿ ಬಳಸಲಾಗಿದೆ.
ಆದಿತ್ಯ ಕರಿಕಾಳನ್ ಆಗಿ ನಟ ವಿಕ್ರಮ್, ನಂದಿನಿ/ ಮಂದಾಕಿನಿ ದೇವಿಯಾಗಿ ಐಶ್ವರ್ಯ ರೈ, ರಾಜ ರಾಜ ಚೋಳನಾಗಿ ಜಯಂ ರವಿ ಮತ್ತು ರಾಜಕುಮಾರಿ ಕುಂದವೈ ಪಿರತ್ತಿಯಾರ್ ಪಾತ್ರದಲ್ಲಿ ತ್ರಿಷಾ, ವಲ್ಲವರಾಯನ್ ವಂದಿಯಾದೇವನ್ ಆಗಿ ಕಾರ್ತಿ, ಸುಂದರ ಚೋಳ ಆಗಿ ಪ್ರಕಾಶ್ ರಾಜ್ ಕಾಣಿಸಿಕೊಂಡಿದ್ದಾರೆ.ಮಣಿರತ್ನಂ ನಿರ್ದೇಶನದ ಈ ಸಿನಿಮಾಕ್ಕೆ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ.
Kapil Sharma Advice To Actor Vikram That Twitter Is Very Risky, After Little Bit Whisky.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm