ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm