ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.
ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.
ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am