ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm