ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm