ಬ್ರೇಕಿಂಗ್ ನ್ಯೂಸ್
21-10-22 01:34 pm Source: Vijayakarnataka ಸಿನಿಮಾ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರ ( Puneeth Rajkumar ) ಹೆಸರಿನಲ್ಲಿ ಬೆಂಗಳೂರಿನ ಅರೆಮನೆ ಮೈದಾನದಲ್ಲಿ ಇಂದು ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಟ್ಟಿದ್ದು, ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳಿಂದ ಸ್ಟಾರ್ ನಟರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪುನೀತ ಪರ್ವ ಕಾರ್ಯಕ್ರಮ ಎಲ್ಲಿ ನಡೆಯಲಿದೆ?
ಇಂದು ಸಂಜೆ ಆರು ಗಂಟೆಗೆ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ ಪುನೀತ ಪರ್ವ ಕಾರ್ಯಕ್ರಮ ಆರಂಭವಾಗಲಿದೆ. ಅಕ್ಟೋಬರ್ 29ರಂದು ಪುನೀತ್ ರಾಜ್ಕುಮಾರ್ಅವರ ಮೊದಲ ವರ್ಷದ ಪುಣ್ಯಸ್ಮರಣೆ. ಅಕ್ಟೋಬರ್ 21ರಂದು ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 1ರಂದು ಪುನೀತ್ ರಾಜ್ ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ.
ಸ್ಟಾರ್ ಕಲಾವಿದರು ಭಾಗಿ
‘ಪುನೀತ ಪರ್ವ’ಕಾರ್ಯಕ್ರಮಕ್ಕೆ ಆಗಮಿಸುವವರು ಬಿಳಿ ಬಣ್ಣದ ಉಡುಪು ಧರಿಸಲು ಮನವಿ ಮಾಡಲಾಗಿದೆ. ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ರಾಕಿಂಗ್ ಸ್ಟಾರ್ಯಶ್, ತಮಿಳು ನಟ ಸೂರ್ಯ, ತೆಲುಗಿನ ಬಾಲಯ್ಯ, ರಾಣಾ ದಗ್ಗುಬಾಟಿ ಸೇರಿದಂತೆ ದಕ್ಷಿಣ ಭಾರತದ ಹಲವು ನಟರು ಪಾಲ್ಗೊಳ್ಳಲಿದ್ದಾರೆ. ಕನ್ನಡದ ಎಲ್ಲಾನಟ, ನಟಿಯರು ಈ ಕಾರ್ಯಕ್ರಮದಲ್ಲಿ ಇರಲಿದ್ದಾರೆ.
ಭರ್ಜರಿ ಗಾನಸುಧೆ
‘ಪುನೀತ ಪರ್ವ’ಕಾರ್ಯಕ್ರಮದಲ್ಲಿ ಹಾಡು, ಡಾನ್ಸ್ ಕೂಡ ಇರಲಿವೆ. ಕುನಾಲ್ ಗಾಂಜಾವಾಲ, ಅರ್ಮಾನ್ ಮಲಿಕ್ ಗಾನಸುಧೆ ಹರಿಸಲಿದ್ದಾರೆ. ಪ್ರಭುದೇವ ಮತ್ತು ನಟಿ ರಮ್ಯಾ ನೃತ್ಯ ಮಾಡಲಿದ್ದಾರೆ.
ಅಭಿಮಾನಿಗಳ ದಂಡು
‘ಪುನೀತ ಪರ್ವ’ಕಾರ್ಯಕ್ರಮ ಅಪ್ಪು ಪತ್ನಿ ಅಶ್ವಿನಿ ಅವರ ನೇತೃತ್ವದಲ್ಲಿ ನಡೆಯಲಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೇ ಇದರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ‘ಈ ಕಾರ್ಯಕ್ರಮ ಎಲ್ಲರ ಕಣ್ಣಿಗೆ ಹಬ್ಬದ ಹಾಗೆ ಇರುತ್ತದೆ. ಇದನ್ನು ಅಭಿಮಾನಿಗಳಿಗಾಗಿ ಮಾಡುತ್ತಿದ್ದೇವೆ. ಎಲ್ಲರಿಗೂ ತಲುಪಿಸೋದು ನಮ್ಮ ಧರ್ಮ. ಅಪ್ಪು ಯಾರೊಬ್ಬರ ಸ್ವತ್ತಲ್ಲ. ಇಡೀ ಕರ್ನಾಟಕದ ಸ್ವತ್ತು. ಕಾರ್ಯಕ್ರಮಕ್ಕೆ ಎಷ್ಟು ಜನ ಬರುತ್ತಾರೆ ಅಂತ ನಾವು ಲೆಕ್ಕ ಹಾಕಲು ಹೋಗಿಲ್ಲ. ಎಷ್ಟೇ ಜನ ಬಂದರೂ ಅವರಿಗೆ ಕಾರ್ಯಕ್ರಮ ತೋರಿಸುವ ಕೆಲಸ ನಮ್ಮದು. ಅದಕ್ಕೆ ನಾವು ರೆಡಿಯಿದ್ದೇವೆ’ ಎಂದು ರಾಘವೇಂದ್ರ ರಾಜ್ಕುಮಾರ್ತಿಳಿಸಿದ್ದಾರೆ.
2021 ಅಕ್ಟೋಬರ್ 29ರಂದು ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು.
South Indian Star Actors Attend Puneeth Rajkumar Puneeth Parva.
02-02-25 02:31 pm
Bangalore Correspondent
Mla BR Patil resigns: ಸಿಎಂ ರಾಜಕೀಯ ಸಲಹೆಗಾರ ಹುದ...
02-02-25 01:43 pm
ಆಂಧ್ರ, ಬಿಹಾರಕ್ಕೆ ಒತ್ತು ಕೊಟ್ಟಿದ್ದಾರೆ, ಕರ್ನಾಟಕಕ...
01-02-25 05:12 pm
ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾ...
31-01-25 10:10 pm
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
01-02-25 09:51 pm
HK News Desk
ಎರ್ನಾಕುಲಂ ಜಿಲ್ಲೆಯಲ್ಲಿ ಒಂದೇ ದಿನ 27 ಬಾಂಗ್ಲಾ ದೇಶ...
01-02-25 09:35 pm
2025ರ ಕೇಂದ್ರ ಬಜೆಟ್ ಗುಂಡಿನ ಗಾಯಕ್ಕೆ ಹಾಕಿದ ಬ್ಯಾಂ...
01-02-25 05:51 pm
ಕೇಂದ್ರ ಬಜೆಟ್ ಮಂಡನೆ ; ಕೃಷಿಕರು, ಮಧ್ಯಮ ವರ್ಗಕ್ಕೆ...
01-02-25 02:10 pm
Sonia Gandhi, president Murmu: ರಾಷ್ಟ್ರಪತಿ ಬಗ್...
31-01-25 09:10 pm
02-02-25 05:02 pm
Mangalore Correspondent
Air India Express, Mangalore Delhi flight: ಮಂ...
01-02-25 07:47 pm
Kotekar Bank Robbery, Murgan D Devar: ಕೋಟೆಕಾರ...
01-02-25 02:32 pm
Mangalore builder Jitendra Kottary, prasanna...
31-01-25 11:05 pm
Mangalore Prasad attavar, RTI Snehamayi Krish...
31-01-25 10:49 pm
02-02-25 09:00 pm
Bangalore Correspondent
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm