ಬ್ರೇಕಿಂಗ್ ನ್ಯೂಸ್
21-10-22 01:34 pm Source: Vijayakarnataka ಸಿನಿಮಾ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರ ( Puneeth Rajkumar ) ಹೆಸರಿನಲ್ಲಿ ಬೆಂಗಳೂರಿನ ಅರೆಮನೆ ಮೈದಾನದಲ್ಲಿ ಇಂದು ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಟ್ಟಿದ್ದು, ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳಿಂದ ಸ್ಟಾರ್ ನಟರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪುನೀತ ಪರ್ವ ಕಾರ್ಯಕ್ರಮ ಎಲ್ಲಿ ನಡೆಯಲಿದೆ?
ಇಂದು ಸಂಜೆ ಆರು ಗಂಟೆಗೆ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ ಪುನೀತ ಪರ್ವ ಕಾರ್ಯಕ್ರಮ ಆರಂಭವಾಗಲಿದೆ. ಅಕ್ಟೋಬರ್ 29ರಂದು ಪುನೀತ್ ರಾಜ್ಕುಮಾರ್ಅವರ ಮೊದಲ ವರ್ಷದ ಪುಣ್ಯಸ್ಮರಣೆ. ಅಕ್ಟೋಬರ್ 21ರಂದು ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 1ರಂದು ಪುನೀತ್ ರಾಜ್ ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ.
ಸ್ಟಾರ್ ಕಲಾವಿದರು ಭಾಗಿ
‘ಪುನೀತ ಪರ್ವ’ಕಾರ್ಯಕ್ರಮಕ್ಕೆ ಆಗಮಿಸುವವರು ಬಿಳಿ ಬಣ್ಣದ ಉಡುಪು ಧರಿಸಲು ಮನವಿ ಮಾಡಲಾಗಿದೆ. ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ರಾಕಿಂಗ್ ಸ್ಟಾರ್ಯಶ್, ತಮಿಳು ನಟ ಸೂರ್ಯ, ತೆಲುಗಿನ ಬಾಲಯ್ಯ, ರಾಣಾ ದಗ್ಗುಬಾಟಿ ಸೇರಿದಂತೆ ದಕ್ಷಿಣ ಭಾರತದ ಹಲವು ನಟರು ಪಾಲ್ಗೊಳ್ಳಲಿದ್ದಾರೆ. ಕನ್ನಡದ ಎಲ್ಲಾನಟ, ನಟಿಯರು ಈ ಕಾರ್ಯಕ್ರಮದಲ್ಲಿ ಇರಲಿದ್ದಾರೆ.
ಭರ್ಜರಿ ಗಾನಸುಧೆ
‘ಪುನೀತ ಪರ್ವ’ಕಾರ್ಯಕ್ರಮದಲ್ಲಿ ಹಾಡು, ಡಾನ್ಸ್ ಕೂಡ ಇರಲಿವೆ. ಕುನಾಲ್ ಗಾಂಜಾವಾಲ, ಅರ್ಮಾನ್ ಮಲಿಕ್ ಗಾನಸುಧೆ ಹರಿಸಲಿದ್ದಾರೆ. ಪ್ರಭುದೇವ ಮತ್ತು ನಟಿ ರಮ್ಯಾ ನೃತ್ಯ ಮಾಡಲಿದ್ದಾರೆ.
ಅಭಿಮಾನಿಗಳ ದಂಡು
‘ಪುನೀತ ಪರ್ವ’ಕಾರ್ಯಕ್ರಮ ಅಪ್ಪು ಪತ್ನಿ ಅಶ್ವಿನಿ ಅವರ ನೇತೃತ್ವದಲ್ಲಿ ನಡೆಯಲಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೇ ಇದರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ‘ಈ ಕಾರ್ಯಕ್ರಮ ಎಲ್ಲರ ಕಣ್ಣಿಗೆ ಹಬ್ಬದ ಹಾಗೆ ಇರುತ್ತದೆ. ಇದನ್ನು ಅಭಿಮಾನಿಗಳಿಗಾಗಿ ಮಾಡುತ್ತಿದ್ದೇವೆ. ಎಲ್ಲರಿಗೂ ತಲುಪಿಸೋದು ನಮ್ಮ ಧರ್ಮ. ಅಪ್ಪು ಯಾರೊಬ್ಬರ ಸ್ವತ್ತಲ್ಲ. ಇಡೀ ಕರ್ನಾಟಕದ ಸ್ವತ್ತು. ಕಾರ್ಯಕ್ರಮಕ್ಕೆ ಎಷ್ಟು ಜನ ಬರುತ್ತಾರೆ ಅಂತ ನಾವು ಲೆಕ್ಕ ಹಾಕಲು ಹೋಗಿಲ್ಲ. ಎಷ್ಟೇ ಜನ ಬಂದರೂ ಅವರಿಗೆ ಕಾರ್ಯಕ್ರಮ ತೋರಿಸುವ ಕೆಲಸ ನಮ್ಮದು. ಅದಕ್ಕೆ ನಾವು ರೆಡಿಯಿದ್ದೇವೆ’ ಎಂದು ರಾಘವೇಂದ್ರ ರಾಜ್ಕುಮಾರ್ತಿಳಿಸಿದ್ದಾರೆ.
2021 ಅಕ್ಟೋಬರ್ 29ರಂದು ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು.
South Indian Star Actors Attend Puneeth Rajkumar Puneeth Parva.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm