ಬ್ರೇಕಿಂಗ್ ನ್ಯೂಸ್
24-10-22 01:38 pm Source: Vijayakarnataka ಸಿನಿಮಾ
‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ( Ajay Rao ) ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ( Bank Of Bhagyalakshmi ). ಇದು ಎಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ.
'ಬ್ಯಾಂಕ್ ಆಫ್ ಭಾಗ್ಯಲಕ್ಷಿ' ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಎಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ', ‘ಬಹುಪರಾಕ್' ಮತ್ತು ‘ಆಪರೇಷನ್ ಅಲಮೇಲಮ್ಮ' ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. 'ಪಿನಾಕ' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ.
ಬ್ಯಾಂಕ್ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
Actor Ajay Rao Starrer Bank Of Bhagyalakshmi Movie.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm