ಬ್ರೇಕಿಂಗ್ ನ್ಯೂಸ್
24-10-22 01:38 pm Source: Vijayakarnataka ಸಿನಿಮಾ
‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ( Ajay Rao ) ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ( Bank Of Bhagyalakshmi ). ಇದು ಎಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ.
'ಬ್ಯಾಂಕ್ ಆಫ್ ಭಾಗ್ಯಲಕ್ಷಿ' ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಎಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ', ‘ಬಹುಪರಾಕ್' ಮತ್ತು ‘ಆಪರೇಷನ್ ಅಲಮೇಲಮ್ಮ' ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. 'ಪಿನಾಕ' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ.
ಬ್ಯಾಂಕ್ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
Actor Ajay Rao Starrer Bank Of Bhagyalakshmi Movie.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm