ಬ್ರೇಕಿಂಗ್ ನ್ಯೂಸ್
25-10-22 03:28 pm Source: Vijayakarnataka ಸಿನಿಮಾ
ನಟ ವಿಜಯ ರಾಘವೇಂದ್ರ ( Vijay Raghavendra ) ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯುವ ಪ್ರತಿಭೆ ಸಿದ್ಧ್ರುವ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ಮರೀಚಿ’ ಎಂಬ ಚಿತ್ರಕ್ಕೆ ಚಿನ್ನಾರಿ ಮುತ್ತ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ.
‘ಮರೀಚಿ’ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ . ‘ಮರೀಚಿ’ ಕಥೆ ಕೇಳಿ ವಿಜಯ ರಾಘವೇಂದ್ರ ಕೂಡ ಇಂಪ್ರೆಸ್ ಆಗಿದ್ದು ಯುವ ನಿರ್ದೇಶಕನ ಜೊತೆ ಸಿನಿಮಾ ಮಾಡಲು ಕೈ ಜೋಡಿಸಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಸಿನಿಮಾ ಸೆಟ್ಟೇರಲಿದ್ದು, ಅದಕ್ಕೂ ಮುನ್ನ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ದೇಶಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಚಿತ್ರದಲ್ಲಿ ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ನವೆಂಬರ್ನಲ್ಲಿ 'ಮರೀಚಿ' ಚಿತ್ರೀಕರಣ ಆರಂಭಗೊಳ್ಳಲಿದ್ದು, ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ ಹಲವು ಕಡೆ ಸಿನಿಮಾ ಸೆರೆ ಹಿಡಿಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಶೀಘ್ರದಲ್ಲೇ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.
'ಕಾಸಿನ ಸರ' ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಜೋಡಿಯಾಗಿ ಹರ್ಷಿಕಾ ಪೂಣಚ್ಚ ನಟಿಸುತ್ತಿದ್ದಾರೆ. 'ಈ ಚಿತ್ರದಲ್ಲಿ ಅವರ ಪಾತ್ರದ ಹೆಸರು ಸಂಪಿಗೆ. ಕೃಷಿ ವಿದ್ಯಾರ್ಥಿನಿಯಾಗಿ ಹರ್ಷಿಕಾ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ಕಾಸಿನ ಸರ ಎನ್ನುವುದು ಬರೀ ಆಭರಣವಲ್ಲ. ಗ್ರಾಮೀಣ ಭಾಗದಲ್ಲಿ ಕಾಸಿನ ಸರಕ್ಕೆ ಅದರದ್ದೇ ಆದ ಮಹತ್ವವಿದೆ. ಅದು ಬರೀ ಆಡಂಬರವಲ್ಲ. ಅದಕ್ಕೊಂದು ಒಳಾರ್ಥವಿದೆ. ಅದರ ಜೊತೆಗೆ ರೈತರ ಸಮಸ್ಯೆಗಳೂ ಇವೆ. ಈ ಚಿತ್ರದಲ್ಲಿ ಸುಂದರೇಶ ಎಂಬ ರೈತ ಹೋರಾಟಗಾರನಾಗಿ ವಿಜಯ್ ರಾಘವೇಂದ್ರ ಕಾಣಿಸಿಕೊಳ್ಳಲಿದ್ದಾರೆ. ವ್ಯವಸಾಯದ ಮೇಲೆ ಭರವಸೆ ಇಟ್ಟು ಬರುವ ಯುವಕನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.
Actor Vijay Raghavendra Sonu Gowda Starrer Mareechi Movie.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am