ಬ್ರೇಕಿಂಗ್ ನ್ಯೂಸ್
04-11-22 01:39 pm Source: Vijayakarnataka ಸಿನಿಮಾ
ರಮ್ಯಾ ಅವರು 8 ವರ್ಷದಿಂದ ನಟಿಸಿಲ್ಲ, ಈಗ ಅವರು ನಮ್ಮ ಸಿನಿಮಾದಲ್ಲಿ ನಟಿಸಬೇಕು. ರಮ್ಯಾ ( Ramya ) ನಮ್ಮ ಸಿನಿಮಾದಲ್ಲಿ ನಟಿಸಿಲ್ಲ ಅಂದ್ರೆ ದೇಹದಲ್ಲಿರುವ ರಕ್ತ ಕೊಡ್ತೀನಿ, ರಮ್ಯಾ ನೋಡದಿರುವ ಕಣ್ಣುಗಳನ್ನು ಕತ್ತರಿಸಿಹಾಕಿಬಿಡ್ತೀನಿ, ಕೈಕಾಲು ಕಟ್ ಮಾಡಿಕೊಳ್ತೀವಿ ಅಂತ ಹಾಸ್ಟೆಲ್ ಹುಡುಗರು ಬೇಡಿಕೆಯಿಟ್ಟಿದ್ದಾರೆ. ಆ ನಂತರ ರಮ್ಯಾ ಅವರು ಓಕೆ ಎಂದಿದ್ದಾರೆ. ಏನಿದು ಈ ರೀತಿ ಅಂತ ಕೆಲವರಿಗೆ ಸಂದೇಹ ಬಂದಿರಬಹುದು.
ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಕಮ್ಬ್ಯಾಕ್ ಮಾಡುತ್ತಾರೆ ಎನ್ನಲಾಗಿತ್ತು. ಕೊನೆ ಕ್ಷಣದಲ್ಲಿ ರಮ್ಯಾ ಆ ಚಿತ್ರದಿಂದ ಹೊರ ಬಂದರು. ಈಗ ಅವರು ಇನ್ನೊಂದು ಚಿತ್ರದಲ್ಲಿಅತಿಥಿ ಪಾತ್ರದಲ್ಲಿ ನಟಿಸಿದ್ದಾರಂತೆ, ಅದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ( Hostel Hudugaru Bekagiddare ). ಆದರೆ ಚಿತ್ರತಂಡ, ರಮ್ಯ ಅವರು ನಟಿಸಿಲ್ಲ, ಬದಲಿಗೆ ಪ್ರೋಮೊದಲ್ಲಿ ಮಾತ್ರ ಇದ್ದಾರೆ ಎಂದಿದೆ.

ನಿತಿನ್ ಕೃಷ್ಣ ಮೂರ್ತಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಇವರು ಮನರಂಜನಾ ವಾಹಿನಿಯೊಂದರಲ್ಲಿ ಮುಖ್ಯ ಹುದ್ದೆಯಲ್ಲಿದ್ದರು. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಫನ್ ಕಾಮಿಡಿ ಜಾನರ್ನ ಚಿತ್ರ. ಇದರಲ್ಲಿ 300 ಜನ ಹೊಸ ಕಲಾವಿದರು ನಟಿಸಿದ್ದಾರೆ. ಒಂದು ಹಾಸ್ಟೆಲ್ನಲ್ಲಿ ನಡೆಯುವ ಘಟನೆಗಳೇ ಈ ಸಿನಿಮಾಗೆ ಸ್ಪೂರ್ತಿ. ಒಂದಿಡೀ ಹಾಸ್ಟೆಲ್ ಹಲವು ತಮಾಷೆಗಳ ಆಗರವಾಗಿರುತ್ತದೆ. ಅದನ್ನು ಹೇಗೆ ನಡೆಯುತ್ತದೋ ಹಾಗೆ ಸೆರೆ ಹಿಡಿದರೆ ಹೇಗಿರುತ್ತದೆ ಎಂಬುದರ ಫಾರ್ಮಾಟ್ ಈ ಚಿತ್ರ. ಇದನ್ನು ಫೌಂಡ್ ಪುಟೇಜ್ ಕಾಮಿಡಿ ಎಂದು ಸಹ ಕರೆಯುತ್ತಾರೆ’ ಎಂದಿದ್ದಾರೆ ನಿರ್ದೇಶಕ ನಿತಿನ್ ಕೃಷ್ಣಮೂರ್ತಿ.
‘ರಮ್ಯಾ ಅವರು ಸಿನಿಮಾದಲ್ಲಿ ನಟಿಸುತ್ತಾರಾ ಇಲ್ಲವಾ ಎಂಬುದನ್ನು ನಾವು ಹೇಳಿಲ್ಲ. ಆದರೆ ಈ ಪ್ರೋಮೊ ವಿಡಿಯೋದಲ್ಲಂತೂ ಅವರಿದ್ದಾರೆ. ಅಷ್ಟನ್ನು ಮಾತ್ರ ನಾನು ಹೇಳುತ್ತೇನೆ. ಹೊಸಬರಿಗೆ ರಮ್ಯಾ ಅವರಂತಹ ದೊಡ್ಡ ನಟಿಯ ಬೆಂಬಲ ಸಿಕ್ಕಿದ್ದು ನಮ್ಮ ಅದೃಷ್ಟ’ ಎಂದು ಅಡ್ಡ ಗೋಡೆಯ ಮೇಲೆ ದೀಪವನ್ನು ಇಟ್ಟಿದ್ದಾರೆ ನಿರ್ದೇಶಕರು. ಒಟ್ಟಾರೆ ರಮ್ಯಾ ಕಮ್ಬ್ಯಾಕ್ ಇನ್ನೂ ನಿರ್ಧಾರವಾಗಿಲ್ಲ. ಆದರೆ ಅವರ ನಟನೆಯ ಸಿನಿಮಾದ ಅಧಿಕೃತ ಅನೌನ್ಸ್ಮೆಂಟ್ ಆಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಎಲ್ಲದಕ್ಕೂ ರಮ್ಯ ಅವರೇ ಉತ್ತರಿಸಬೇಕಿದೆ.
Actress Ramya Act In Hostel Hudugaru Bekagiddare Movie Promotional Video.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm