ಬ್ರೇಕಿಂಗ್ ನ್ಯೂಸ್
11-11-22 02:35 pm Source: Vijayakarnataka ಸಿನಿಮಾ
ಕ್ರಿಸ್ಮಸ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದೆ. ಜಗತ್ತಿನೆಲ್ಲೆಡೆ ಹಬ್ಬಕ್ಕೆ ಸಿದ್ಧತೆ ಜೋರಾಗಿದೆ. ಮೈಸೂರಿನಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗ್ತಿದ್ದು, ಪ್ರತಿಷ್ಠಿತ ಹೋಟೆಲ್ ಸಂದೇಶ್ ದಿ ಪ್ರಿನ್ಸ್ ಹೋಟೆಲ್ನಲ್ಲಿ ಕೇಕ್ ತಯಾರಿಕೆಗೆ ಚಾಲನೆ ನೀಡಲಾಗಿದೆ. ಮೈಸೂರಿನಲ್ಲಿ ನಡೆದ ಕ್ರಿಸ್ಮಸ್ ಕೇಕ್ ಮಿಕ್ಸಿಂಗ್ ಸಮಾರಂಭದಲ್ಲಿ ಬಹುಭಾಷಾ ಖ್ಯಾತ ನಟ ಪ್ರಭುದೇವ ( Prabhu Deva ) ಭಾಗಿಯಾಗಿದ್ರು.
ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ನಡೆದ ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ ಸಮಾರಂಭದಲ್ಲಿ ಈ ಬಾರಿ ನಟ ಪ್ರಭುದೇವ ಭಾಗಿಯಾಗಿದ್ರು. ವಿವಿಧ ಬಗೆಯ ಡ್ರೈ ಫ್ರುಟ್ಸ್ಗಳನ್ನು ಮಾತ್ರ ಮಿಕ್ಸ್ ಮಾಡಿದ ನಟ ಪ್ರಭುದೇವ ಎಲ್ಲರ ಗಮನಸೆಳೆದರು. ಆಲ್ಕೋಹಾಲ್ ಮಿಶ್ರಿತ ವೈನ್ ಮಿಕ್ಸಿಂಗ್ ಮಾಡದ ನಟ ಪ್ರಭುದೇವ ಮಿಕ್ಸಿಂಗ್ನಿಂದ ದೂರ ಉಳಿದರು.
ಆಲ್ಕೋಹಾಲ್ ಮಿಶ್ರಿತ ಮದ್ಯದ ಬಾಟಲಿಗಳನ್ನು ಮುಟ್ಟದೇ ಸುಮ್ಮನೇ ನೋಡುತ್ತಾ ನಿಂತ ನಟ ಪ್ರಭುದೇವ ಕೇಕ್ ಮಿಕ್ಸಿಂಗ್ ನೋಡಿ ಖುಷಿಪಟ್ಟರು .ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಮಾಲೀಕ ಹಾಗು ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಹಾಗು ಅವರ ಪುತ್ರ ಸೇರಿದಂತೆ ಕುಟುಂಬ ಸದಸ್ಯರು, ಹೋಟೆಲ್ನ ಸಿಬ್ಬಂದಿಗಳು ಕ್ರಿಸ್ಮಸ್ ಕೇಕ್ ಮಿಕ್ಸಿಂಗ್ನಲ್ಲಿ ಭಾಗಿಯಾಗಿದ್ರು.
ಕೇಕ್ ಮಿಕ್ಸಿಂಗ್ ಸಮಾರಂಭ ಮುಗಿಯುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಟ ಪ್ರಭುದೇವ ನಿರಾಕರಣೆ ಮಾಡಿದ್ರು. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಪ್ರಭುದೇವ ಹೋಟೆಲ್ನಿಂದ ನಿರ್ಗಮಿಸಿದರು.
ಸಾಲು ಸಾಲು ಸಿನಿಮಾದಲ್ಲಿ ಪ್ರಭು ಬ್ಯುಸಿ..!
ಸಂದೇಶ್ ನಾಗರಾಜ್ ನಿರ್ಮಾಣದ ಉಲ್ಫ್ ತಮಿಳು ಚಿತ್ರದಲ್ಲಿ ನಟ ಪ್ರಭುದೇವ ನಾಯಕನಾಗಿ ನಟಿಸುತ್ತಿದ್ದಾರೆ. ಉಲ್ಫ್ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಹಾಗಾಗಿ ಪ್ರಭುದೇವ ಕುಟುಂಬ ಸದಸ್ಯರನ್ನು ನೋಡಲು ಮೈಸೂರಿಗೆ ಬರುವ ವಿಚಾರ ತಿಳಿದು ಈ ಬಾರಿಯ ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ಗೆ ಅವರನ್ನೇ ಆಹ್ವಾನಿಸಲಾಗಿತ್ತು. ನಟ ಪ್ರಭುದೇವ ನಟನೆಯ ಉಲ್ಫ್ ತಮಿಳುಚಿತ್ರದ ಜೊತೆ ಜೊತೆಗೆ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಟಿಸುತ್ತಿರುವ ಘೋಸ್ಟ್ ಕನ್ನಡ ಚಿತ್ರದ ಚಿತ್ರೀಕರಣವು ನಡೆಯುತ್ತಿದೆ. ಇದು ಕೂಡ ಸಂದೇಶ್ ನಾಗರಾಜ್ ಅವರೇ ನಿರ್ಮಿಸುತ್ತಿದ್ದಾರೆ.
ರಾಜಕೀಯದಿಂದ ಸಂದೇಶ್ ನಾಗರಾಜ್ ದೂರ.!
ಸದ್ಯ ಸಂದೇಶ್ ನಾಗರಾಜ್ ರಾಜಕೀಯದಿಂದ ದೂರ ಇದ್ದಾರೆ. ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಒಟ್ಟೊಟ್ಟಿಗೆ 2-3ಸಿನಿಮಾಗಳನ್ನ ನಿರ್ಮಾಣ ಮಾಡ್ತಿದ್ದಾರೆ. ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ.
Prabhudeva Joins Cake Mixing Ceremony At Mysuru.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm