ಬ್ರೇಕಿಂಗ್ ನ್ಯೂಸ್
11-11-22 02:35 pm Source: Vijayakarnataka ಸಿನಿಮಾ
ಕ್ರಿಸ್ಮಸ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದೆ. ಜಗತ್ತಿನೆಲ್ಲೆಡೆ ಹಬ್ಬಕ್ಕೆ ಸಿದ್ಧತೆ ಜೋರಾಗಿದೆ. ಮೈಸೂರಿನಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗ್ತಿದ್ದು, ಪ್ರತಿಷ್ಠಿತ ಹೋಟೆಲ್ ಸಂದೇಶ್ ದಿ ಪ್ರಿನ್ಸ್ ಹೋಟೆಲ್ನಲ್ಲಿ ಕೇಕ್ ತಯಾರಿಕೆಗೆ ಚಾಲನೆ ನೀಡಲಾಗಿದೆ. ಮೈಸೂರಿನಲ್ಲಿ ನಡೆದ ಕ್ರಿಸ್ಮಸ್ ಕೇಕ್ ಮಿಕ್ಸಿಂಗ್ ಸಮಾರಂಭದಲ್ಲಿ ಬಹುಭಾಷಾ ಖ್ಯಾತ ನಟ ಪ್ರಭುದೇವ ( Prabhu Deva ) ಭಾಗಿಯಾಗಿದ್ರು.
ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ನಡೆದ ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ ಸಮಾರಂಭದಲ್ಲಿ ಈ ಬಾರಿ ನಟ ಪ್ರಭುದೇವ ಭಾಗಿಯಾಗಿದ್ರು. ವಿವಿಧ ಬಗೆಯ ಡ್ರೈ ಫ್ರುಟ್ಸ್ಗಳನ್ನು ಮಾತ್ರ ಮಿಕ್ಸ್ ಮಾಡಿದ ನಟ ಪ್ರಭುದೇವ ಎಲ್ಲರ ಗಮನಸೆಳೆದರು. ಆಲ್ಕೋಹಾಲ್ ಮಿಶ್ರಿತ ವೈನ್ ಮಿಕ್ಸಿಂಗ್ ಮಾಡದ ನಟ ಪ್ರಭುದೇವ ಮಿಕ್ಸಿಂಗ್ನಿಂದ ದೂರ ಉಳಿದರು.
ಆಲ್ಕೋಹಾಲ್ ಮಿಶ್ರಿತ ಮದ್ಯದ ಬಾಟಲಿಗಳನ್ನು ಮುಟ್ಟದೇ ಸುಮ್ಮನೇ ನೋಡುತ್ತಾ ನಿಂತ ನಟ ಪ್ರಭುದೇವ ಕೇಕ್ ಮಿಕ್ಸಿಂಗ್ ನೋಡಿ ಖುಷಿಪಟ್ಟರು .ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಮಾಲೀಕ ಹಾಗು ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಹಾಗು ಅವರ ಪುತ್ರ ಸೇರಿದಂತೆ ಕುಟುಂಬ ಸದಸ್ಯರು, ಹೋಟೆಲ್ನ ಸಿಬ್ಬಂದಿಗಳು ಕ್ರಿಸ್ಮಸ್ ಕೇಕ್ ಮಿಕ್ಸಿಂಗ್ನಲ್ಲಿ ಭಾಗಿಯಾಗಿದ್ರು.
ಕೇಕ್ ಮಿಕ್ಸಿಂಗ್ ಸಮಾರಂಭ ಮುಗಿಯುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಟ ಪ್ರಭುದೇವ ನಿರಾಕರಣೆ ಮಾಡಿದ್ರು. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಪ್ರಭುದೇವ ಹೋಟೆಲ್ನಿಂದ ನಿರ್ಗಮಿಸಿದರು.
ಸಾಲು ಸಾಲು ಸಿನಿಮಾದಲ್ಲಿ ಪ್ರಭು ಬ್ಯುಸಿ..!
ಸಂದೇಶ್ ನಾಗರಾಜ್ ನಿರ್ಮಾಣದ ಉಲ್ಫ್ ತಮಿಳು ಚಿತ್ರದಲ್ಲಿ ನಟ ಪ್ರಭುದೇವ ನಾಯಕನಾಗಿ ನಟಿಸುತ್ತಿದ್ದಾರೆ. ಉಲ್ಫ್ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಹಾಗಾಗಿ ಪ್ರಭುದೇವ ಕುಟುಂಬ ಸದಸ್ಯರನ್ನು ನೋಡಲು ಮೈಸೂರಿಗೆ ಬರುವ ವಿಚಾರ ತಿಳಿದು ಈ ಬಾರಿಯ ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ಗೆ ಅವರನ್ನೇ ಆಹ್ವಾನಿಸಲಾಗಿತ್ತು. ನಟ ಪ್ರಭುದೇವ ನಟನೆಯ ಉಲ್ಫ್ ತಮಿಳುಚಿತ್ರದ ಜೊತೆ ಜೊತೆಗೆ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಟಿಸುತ್ತಿರುವ ಘೋಸ್ಟ್ ಕನ್ನಡ ಚಿತ್ರದ ಚಿತ್ರೀಕರಣವು ನಡೆಯುತ್ತಿದೆ. ಇದು ಕೂಡ ಸಂದೇಶ್ ನಾಗರಾಜ್ ಅವರೇ ನಿರ್ಮಿಸುತ್ತಿದ್ದಾರೆ.
ರಾಜಕೀಯದಿಂದ ಸಂದೇಶ್ ನಾಗರಾಜ್ ದೂರ.!
ಸದ್ಯ ಸಂದೇಶ್ ನಾಗರಾಜ್ ರಾಜಕೀಯದಿಂದ ದೂರ ಇದ್ದಾರೆ. ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಒಟ್ಟೊಟ್ಟಿಗೆ 2-3ಸಿನಿಮಾಗಳನ್ನ ನಿರ್ಮಾಣ ಮಾಡ್ತಿದ್ದಾರೆ. ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ.
Prabhudeva Joins Cake Mixing Ceremony At Mysuru.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm