ಬ್ರೇಕಿಂಗ್ ನ್ಯೂಸ್
26-11-22 01:54 pm Source: Vijayakarnataka ಸಿನಿಮಾ
ಸ್ಯಾಂಡಲ್ವುಡ್ ಭಾರತೀಯ ಚಿತ್ರರಂಗದ ಶೈನಿಂಗ್ ಸ್ಟಾರ್ ಆಗಿದೆ. ಕನ್ನಡದ ಸಿನಿಮಾಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಮೊನ್ನೆಯಷ್ಟೇ ಕನ್ನಡದ ಪ್ರತಿಭಾವಂತ ನಟ ಪ್ರಮೋದ್ ‘ಸಲಾರ್’ ಸಿನಿಮಾದಲ್ಲಿ ನಟಿಸುವ ಸುದ್ದಿ ಹೊರಬಿದ್ದಿತ್ತು. ಈಗ ‘ಧೂಮಂ’ ಎಂಬ ಬಹುಭಾಷಾ ಸಿನಿಮಾದಲ್ಲಿ ಹಲವು ಕನ್ನಡದ ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ.
ಲೂಸಿಯಾ, ಯೂ ಟರ್ನ್ ಸಿನಿಮಾಗಳ ಮೂಲಕ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿರುವ ಪವನ್ ಕುಮಾರ್ ‘ಧೂಮಂ’ ಸಿನಿಮಾವನ್ನು ಮಲಯಾಳಂನ ಖ್ಯಾತ ನಟ ಫಹದ್ ಫಾಸಿಲ್ಗೆ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನು ಕೆಜಿಎಫ್ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿಹಲವು ದಿನಗಳ ಕಾಲ ಚಿತ್ರೀಕರಣ ಮುಗಿಸಿದ್ದಾರೆ ಕೂಡ.
‘ಧೂಮಂ ಒಂದು ಸಸ್ಪೆನ್ಸ್ ಸಿನಿಮಾ. ನನ್ನ ಹಿಂದಿನ ಸಿನಿಮಾಗಳಂತೆ ಇಲ್ಲಿಯೂ ಹೊಸ ರೀತಿಯ ನಿರೂಪಣೆ ಇರುತ್ತದೆ. ನಾನು ಯಾವುದೇ ಭಾಷೆಯಲ್ಲಿ ಕೆಲಸ ಮಾಡಿದರೂ ಕನ್ನಡದವರು ಇದ್ದೇ ಇರುತ್ತಾರೆ. ಈ ಬಾರಿಯೂ ಅದು ರಿಪೀಟ್ ಆಗಿದೆ. ‘ಧೂಮಂ’ನಲ್ಲಿ ಅಚ್ಯುತ್ ಕುಮಾರ್, ಕಿರಣ್ ನಾಯಕ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ ಪವನ್ ಕುಮಾರ್.
‘ಧೂಮಂ’ ಚಿತ್ರವನ್ನು ಬಹುಭಾಷಾ ಸಿನಿಮಾ ಎಂದು ಕರೆದರೂ ಫಹದ್ ಫಾಸಿಲ್ ಮತ್ತು ಅಪರ್ಣಾ ಬಾಲಮುರಳಿ ಇರುವುದರಿಂದ ಮಲಯಾಳಂ ಸಿನಿಮಾ ಎಂದೇ ಪರಿಗಣಿತವಾಗುತ್ತದೆ. ಇದು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿತಯಾರಾಗುತ್ತಿದೆ.
ಲವಲವಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅಚ್ಯುತ್ ಕುಮಾರ್ ಮತ್ತು ಕಿರಣ್ ನಾಯಕ್ ಅವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಚ್ಯುತ್ ಕುಮಾರ್ ಈಗಾಗಲೇ ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಮಲಯಾಳಂ ಚಿತ್ರರಂಗಕ್ಕೆ ‘ಧೂಮಂ’ ಸಿನಿಮಾ ಮೂಲಕ ಕಾಲಿಟ್ಟಿದ್ದಾರೆ. ಕನ್ನಡದ ಕಿರುತೆರೆ, ಹಿರಿತೆರೆಯಲ್ಲಿ ಹೆಚ್ಚಾಗಿ ಪೊಲೀಸ್ ಅಧಿಕಾರಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ನಟ ಕಿರಣ್ ನಾಯಕ್ಗೂ ಇದು ಮೊದಲ ಮಲಯಾಳಂ ಸಿನಿಮಾ. ಕಿರಣ್ ಈಗಾಗಲೇ ಪವನ್ ಕುಮಾರ್ ಅವರ ತೆಲುಗು ಮತ್ತು ತಮಿಳಿನ ‘ಯೂ ಟರ್ನ್’ ಸಿನಿಮಾದಲ್ಲಿಯೂ ನಟಿಸಿದ್ದಾರೆ.
ಒಟ್ಟಾರೆ ಕನ್ನಡದ ಒಂದಷ್ಟು ಪ್ರತಿಭಾವಂತರು ಉತ್ತಮ ನಿರ್ಮಾಣ ಸಂಸ್ಥೆ ಮತ್ತು ನಿರ್ದೇಶಕರುಗಳಿಂದ ಇತರೆ ಭಾಷೆಯ ಪ್ರೇಕ್ಷಕರು ಮತ್ತು ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿರುವುದು ಗಮನಾರ್ಹ.
‘ಧೂಮಂ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಇನ್ನೊಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ಶೆಡ್ಯೂಲ್ ಹೈದರಾಬಾದ್ನಲ್ಲಿ ನಡೆಯಲಿದ್ದು. ಇಲ್ಲಿಯವರೆಗೂ ಬಹಳ ಚೆನ್ನಾಗಿ ಚಿತ್ರೀಕರಣವಾಗಿದೆ ಎಂದಿದ್ದಾರೆ ನಿರ್ದೇಶಕ ಪವನ್ ಕುಮಾರ್
Fahadh Faasil Dhoomam Movie Actor Achyuth Kumar And Kiran Nayak.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm