ಬ್ರೇಕಿಂಗ್ ನ್ಯೂಸ್
30-11-22 12:37 pm Source: Vijayakarnataka ಸಿನಿಮಾ
"ವ್ಯಕ್ತಿಯೊಬ್ಬರು ಕೃತಿ ಸನೋನ್ ಅವರನ್ನು ( Kriti Sanon ) ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ಆ ವ್ಯಕ್ತಿ ಮುಂಬೈನಲ್ಲಿ ಇರೋದಿಲ್ಲ, ಈಗ ದೀಪಿಕಾ ಪಡುಕೋಣೆ ಜೊತೆ ಸಿನಿಮಾ ಶೂಟಿಂಗ್ ಮಾಡುತ್ತಿದ್ದಾರೆ" ಎಂದು ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ವರುಣ್ ಧವನ್ ಅವರು ಹೇಳಿದರು. ಹೀಗಂದಿದ್ದೇ ತಡ ಪ್ರಭಾಸ್ ಅವರು ( Prabhas ) ಕೃತಿಯನ್ನು ಪ್ರೀತಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಲು ಶುರುವಾಯ್ತು.
ಏನೇನು ಗಾಸಿಪ್ ಹರಡಿತು?
ಹೋದಲ್ಲಿ ಬಂದಲ್ಲೆಲ್ಲ ವರುಣ್ ಧವನ್ ಅವರು ಕೃತಿ ಸನೋನ್ ಪ್ರೀತಿ ಮಾಡುತ್ತಿದ್ದಾರೆ ಎಂದು ಹೇಳತೊಡಗಿದರು. 'ಆದಿಪುರುಷ್' ಸಿನಿಮಾದಲ್ಲಿ ಕೃತಿ ಹಾಗೂ ಪ್ರಭಾಸ್ ಒಟ್ಟಿಗೆ ನಟಿಸುತ್ತಿದ್ದಾರೆ. ಅಲ್ಲಿಂದಲೇ ಅವರ ಮಧ್ಯೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ ಎಂದು ಕೆಲವರು ಊಹಿಸಿಕೊಳ್ಳಲು ಶುರುಮಾಡಿದರು. ಇದಕ್ಕೆಲ್ಲ ಕೃತಿ ಸನೋನ್ ಅವರು ಉತ್ತರ ನೀಡಿದ್ದಾರೆ.

ಕೃತಿ ಸನೋನ್ ಸ್ಪಷ್ಟನೆ
"ಪ್ರೀತಿಯೂ ಇಲ್ಲ. ರಿಯಾಲಿಟಿ ಶೋನಲ್ಲಿ ನಮ್ಮ ಭೆಡಿಯಾ ( ತೋಳ ) ಸ್ವಲ್ಪ ಕ್ರೂರವಾಯ್ತು. ಅವ ಫನ್ ಸಾಕಷ್ಟು ಗಾಸಿಪ್ಗಳಿಗೆ ಕಾರಣವಾಯ್ತು. ಕೆಲವೊಬ್ಬರು ನನ್ನ ಮದುವೆಯ ಡೇಟ್ ಕೂಡ ಘೋಷಣೆ ಮಾಡಿದರು. ಅದು ಬೇಸ್ಲೆಸ್" ಎಂದು ಕೃತಿ ಸನೋನ್ ಅವರು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ.
ಕಲೆಕ್ಷನ್ ಮಾಡುತ್ತಿರುವ 'ಭೆಡಿಯಾ'
ಕೃತಿ ಸನೋನ್, ವರುಣ್ ಧವನ್ ನಟನೆಯ 'ಭೆಡಿಯಾ' ಸಿನಿಮಾವನ್ನು ಅಮರ್ ಕೌಶಿಕ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ.

3D ರೂಪದಲ್ಲಿ ಚಿತ್ರೀಕರಣ ಮಾಡಲಾಗಿರುವ ಆದಿಪುರುಷ್
ನಟ ಪ್ರಭಾಸ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ಅವರ ಮುಂದಿನ ಸಿನಿಮಾ 'ಆದಿಪುರುಷ್' ಮೇಲೆ ದೊಡ್ಡ ನಿರೀಕ್ಷೆ ಇದೆ. ಜನವರಿ 12ರಂದು ಆ ಸಿನಿಮಾ ತೆರೆಗೆ ಬರಲಿದೆ. ನಿರ್ದೇಶಕ ಓಂ ರಾವುತ್ 'ಆದಿಪುರುಷ್' ಸಿನಿಮಾವನ್ನು ಸಂಪೂರ್ಣ 3D ರೂಪದಲ್ಲಿ ಚಿತ್ರೀಕರಣ ಮಾಡಲಾಗಿದೆ. ಬಹುತೇಕ ಗ್ರೀನ್ ಮ್ಯಾಟ್ (ಕ್ರೋಮಾ ಸ್ಕ್ರೀನ್) ಬಳಸಿ, ಸ್ಟುಡಿಯೋ ಒಳಗೆ ಚಿತ್ರೀಕರಣ ಮಾಡಲಾಗಿದೆ. ಹಾಗಾಗಿ, ವಿಎಫ್ಎಕ್ಸ್ ಕೆಲಸಗಳು ಜಾಸ್ತಿ ಇತ್ತು.
ದೊಡ್ಡ ತಾರಾಗಣವಿದೆ
'ಆದಿಪುರುಷ್' ಶ್ರೀರಾಮನ ಕುರಿತ ಸಿನಿಮಾ. ಶ್ರೀರಾಮನಾಗಿ ಪ್ರಭಾಸ್ ನಟಿಸಿದ್ದು, ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದು ಅವರ ಪಾತ್ರವನ್ನು ಲಂಕೇಶ ಎಂದು ಕರೆಯಲಾಗಿದೆ. ಕೃತಿ ಸನೋನ್ ಇಲ್ಲಿ ಸೀತೆಯಾಗಿ ನಟಿಸಿದ್ದಾರೆ. ಅವರನ್ನು ಸಿನಿಮಾದಲ್ಲಿ ಜಾನಕಿ ಎಂದು ಕರೆಯಲಾಗಿದೆ. ದೇವದತ್ತ ನಾಗೆ ಅವರು ಹನುಮಾನ್ ಆಗಿ ಬಣ್ಣ ಹಚ್ಚಿದ್ದು, ಲಕ್ಷ್ಮಣನಾಗಿ ಸನ್ನಿ ಸಿಂಗ್ ಇದ್ದಾರೆ. ಇಡೀ ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೆರೆಹಿಡಿಯಲಾಗಿದೆ.
Actress Kriti Sanon Clarification On Love Marriage Gossip With Prabhas.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm